ಡೆಹ್ರಾಡೂನ್ (ಪಿಟಿಐ): ಖಾಸಗಿ ಬಸ್ ಉರುಳಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ರೋರಾ ಹಾಗೂ ಜ್ವಲ್ಪಾ ನಡುವಣ ತಿರುವಿನಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಹಾಗೂ ಕ್ಲಿನರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಜೋಷಿ ತಿಳಿಸಿದ್ದಾರೆ.
ಅಲ್ಲದೇ, ದುರಂತದ ವೇಳೆ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದಿರುವ ಅವರು, ಮೂರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.
ಗರ್ವಾಲ್ ಮೋಟಾರ್ ಮಾಲೀಕರ ಸಂಸ್ಥೆಯು ಈ ಬಸ್ ಅನ್ನು ಸರ್ವೀಸಿಂಗ್ ಮಾಡಿಸಲು ಕೋಟೆದ್ವಾರಕ್ಕೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ನಡೆದಿದೆ.