ಲಖನೌ (ಐಎಎನ್ಎಸ್): ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷ ಹಾಗೂ ರಾಜ್ಯಪಾಲ ರಾಮ್ ನಾಯ್ಕ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ.
ಅಧಿಕಾರ ವಹಿಸಿಕೊಂಡು ಮೂರು ತಿಂಗಳಾದ ಸಂದರ್ಭದಲ್ಲಿ ರಾಜ್ಯಪಾಲರು ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸುಧಾರಣೆಯಾಗಬೇಕಿದೆ ಎಂದು ಹೇಳಿರುವುದು ಸಮಾಜವಾದಿ ಪಕ್ಷವನ್ನು ತೀವ್ರವಾಗಿ ಕೆರಳಿಸಿದೆ. ರಾಜ್ಯಪಾಲರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಸಿರುವ ಸಮಾಜವಾದಿ ಪಕ್ಷ ‘ರಾಜ್ಯಪಾಲರು ಸಂವಿಧಾನ ನೀಡಿರುವ ಅಧಿಕಾರಿ ವ್ಯಾಪ್ತಿಯನ್ನೂ ಮೀರಿ ವರ್ತಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದೆ.