ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನ ಹೊಳೆ ಯೋಜನೆ ಜಾರಿಗೆ ವಿರೋಧ

Last Updated 24 ಫೆಬ್ರುವರಿ 2014, 9:08 IST
ಅಕ್ಷರ ಗಾತ್ರ

ದೇವನಹಳ್ಳಿ: ಬಯಲು ಸೀಮೆಯ ಶಾಶ್ವತ ಕುಡಿಯುವ ನೀರಿನ ಯೋಜನೆ ಗೆ ಪರಮಶಿವಯ್ಯ ವರದಿ ಸೂಕ್ತ­ವಾಗಿದ್ದು ಎತ್ತಿನಹೊಳೆ ಯೋಜನೆ ಜಾರಿಗೆ ನಮ್ಮ ವಿರೋಧ ವಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಕಲ್ಯಾಣ ಕುಮಾರ್ ತಿಳಿಸಿದರು.

ಗುರುವಾರ ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಎತ್ತಿನಹೊಳೆ ಸೇರಿದಂತೆ ಯಾವುದೇ ಒಂದು ಯೋಜನೆಗೂ ಸಮಗ್ರ ವರದಿ­ಯಾಗಿಲ್ಲ ಅರಣ್ಯ ಮತ್ತು ಪರಿಸರದ ಸಾಧಕ ಬಾಧಕಗಳ ಬಗ್ಗೆ ಕೇಂದ್ರದಿಂದ ಅನುಮತಿ ಪಡೆದಿಲ್ಲ ವಾದರೂ ಕೇಂದ್ರ ಸಚಿವ ಮೊಯ್ಲಿ ಕಾವೇರಿ ನೀರನ್ನು ಬಯಲು ಸೀಮೆಗೆ ಹರಿಸಲಾಗುವುದು ಎಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದರು.

ರೈತ ಸಂಘ ರಾಜ್ಯ ಉಪಾಧ್ಯಕ್ಷ ಚಂದ್ರತೃಜಸ್ವಿ ಮಾತನಾಡಿ, ಎತ್ತಿನ ಹೊಳೆ ಯೋಜನೆಗಿಂತ ಶಾಶ್ವತ ಸಮಗ್ರ ಯೋಜನೆ ಬಯಲು ಸೀಮೆಗೆ ಅವಶ್ಯಕತೆ ಇದೆ ಮೊಯ್ಲಿಯವರು ಚಿಕ್ಕಬಳ್ಳಾಪುರ ಮುದ್ದೇನಹಳ್ಳಿ ಬಳಿ ಶಂಕು ಸ್ಥಾಪನೆ ಮಾಡುವ ಬದಲು ಎತ್ತಿನಹೊಳೆಯ ಕಾಮಗಾರಿ ಆರಂಭದ ಸ್ಥಳದಲ್ಲೆ ಮಾಡಲಿ ಎಂದರು. ಜನವರಿ 28ರಂದು ಚಿಕ್ಕ­ಬಳ್ಳಾ­ಪುರದಲ್ಲಿ ನಡೆಯಲಿರುವ ಪ್ರತಿ­ಭಟನೆಗೆ ಪಕ್ಷಾತೀತವಾಗಿ ಭಾಗ­ವಹಿಸು­ತ್ತಿದ್ದೆವೆ ಎಂದರು.

ರಾಜ್ಯ ರೈತ ಸಂಘ ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ವೀರಣ್ಣ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್, ಹೊಸಕೋಟೆ ತಾಲ್ಲೂಕು ರೈತ ಸಂಘ ಅಧ್ಯಕ್ಷ ಕೆಂಚೇಗೌಡ ಮತ್ತು ಸತೀಶ್, ಬಯಲು ಸೀಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಆರ್.ಎನ್.ಕೃಷ್ಣ­ಮೂರ್ತಿ, ರೈತ ಮುಖಂಡ ಗೋಪಾಲ­ಸ್ವಾಮಿ, ಸುಬ್ಬಣ್ಣ  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT