ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 11 ಶಂಕಿತ ಎಬೋಲಾ ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಮೂವರು ಕಲಬುರ್ಗಿ ಮತ್ತು ಶಿವಮೊಗ್ಗ ಜಿಲ್ಲೆಯವರು. ಉಳಿದವರು ನೈಜೀರಿಯಾ ಪ್ರಜೆಗಳು.
ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ.
ಎಬೋಲಾ ತಡೆ ಕುರಿತು ರಾಜ್ಯ ಕೈಗೊಂಡಿರುವ ಕ್ರಮಗಳನ್ನು ವಿವರಿಸಿ ನಡ್ಡಾ ಅವರಿಗೆ ಪತ್ರ ಬರೆದಿರುವ ಖಾದರ್, ‘ಸೋಂಕುಪೀಡಿತ
ನೈಜೀರಿಯಾ ಪ್ರಜೆಗಳನ್ನು ಮೂವತ್ತು ದಿನಗಳವರೆಗೆ ಪ್ರತ್ಯೇಕ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಬಗ್ಗೆ ಪ್ರತಿದಿನ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗಿದೆ’ ಎಂದು ಅವರು ವಿವರಿಸಿದ್ದಾರೆ.