ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ ಪಿಜಿ ಸಬ್ಸಿಡಿ ತ್ಯಾಗ ಯೋಜನೆಗೆ ಮೋದಿ ಚಾಲನೆ

Last Updated 27 ಮಾರ್ಚ್ 2015, 6:44 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಅಡುಗೆ ಅನಿಲ (ಎಲ್ ಪಿಜಿ) ಸಬ್ಸಿಡಿ ತ್ಯಾಗ ಮಾಡುವಂತೆ ಪ್ರೇರೇಪಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು.

ಅಡುಗೆ ಅನಿಲ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡುವ ಮೂಲಕ ಸಬ್ಸಿಡಿಯಲ್ಲಿನ ಸೋರಿಕೆಯನ್ನು ತಡೆಗಟ್ಟಲಾಗಿದೆ ಎಂದು ಮೋದಿ ಹೇಳಿದರು.

ರಾಷ್ಟ್ರದ 2.8 ಲಕ್ಷ ಗ್ರಾಹಕರು ಸ್ವಯಂ ಪ್ರೇರಣೆಯಿಂದ ತಾವಾಗಿಯೇ ಅಡುಗೆ ಅನಿಲ ಸಬ್ಸಿಡಿಯನ್ನು ಬಿಟ್ಟುಕೊಟ್ಟಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ರೂ 100 ಕೋಟಿ ಉಳಿತಾಯ ಆಗಿದೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಸಿಡಿದರು.

ಮಾರುಕಟ್ಟೆಯ ದರವನ್ನು ಪಾವತಿಸಿ ಅಡುಗೆ ಅನಿಲ ಖರೀದಿಸುವ ಶಕ್ತಿ ಹೊಂದಿರುವ ಗ್ರಾಹಕರು ಅಡುಗೆ ಅನಿಲ ಸಬ್ಸಿಡಿಯನ್ನು ತ್ಯಾಗ ಮಾಡಬೇಕು ಎಂದು ಪ್ರಧಾನಿ ಇದೇ ವೇಳೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT