ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸಿಬಿಗೆ ಪೊಲೀಸರ ತನಿಖೆ ನಡೆಸುವ ಅಧಿಕಾರವಿದೆ; ಕೋರ್ಟ್‌

Last Updated 26 ಮೇ 2015, 9:13 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೆಹಲಿ ಸರ್ಕಾರ ಮತ್ತು ಲೆ. ಗವರ್ನರ್‌ ನಡುವಿನ  ಜಗಳ ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪೂರಕವಾಗಿ ದೆಹಲಿ ಹೈಕೋರ್ಟ್‌ ನೀಡಿದ ತೀರ್ಪು ದೆಹಲಿ ಸರ್ಕಾರದ ಬತ್ತಳಿಕೆಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಪೊಲೀಸರನ್ನು ಬಂಧಿಸಿ ವಿಚಾರಣೆ ನಡೆಸುವ ಅಧಿಕಾರವಿದೆ ಎಂದು ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರದ ಆರೋಪ ಹೊತ್ತು ಬಂಧಿತರಾಗಿರುವ ಹೆಡ್‌ ಕಾನ್‌ಸ್ಟೆಬಲ್‌ ಅನಿಲ್‌ ಕುಮಾರ್‌ ಅವರ ಜಾಮೀನು  ಪ್ರಕರಣದಲ್ಲಿ ಹೈಕೋರ್ಟ್‌ ಈ ಮಹತ್ವದ ತೀರ್ಪು ನೀಡಿದೆ.  ಅನಿಲ್‌ ಕುಮಾರ್‌ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ ಎಸಿಬಿಗೆ ಪೊಲೀಸರನ್ನು ತನಿಖೆ ನಡೆಸುವ ಅಧಿಕಾರವಿದೆ ಎಂದು ಪ್ರತಿಪಾದಿಸಿತು.

ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಇಲಾಖೆ ಸುತ್ತೋಲೆ ಹೊರಡಿಸಿ ಪೊಲೀಸರನ್ನು ತನಿಖೆ ನಡೆಸುವ ಅಧಿಕಾರ ಎಸಿಬಿಗೆ ಇಲ್ಲ ಎಂದಿತ್ತು.

ಒಂದು ಚುನಾಯಿತ ಸರ್ಕಾರಕ್ಕೆ ಕಾನೂನು ರಚಿಸುವ ಅಧಿಕಾರವಿದೆ. ಆಗಾಗಿ  ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಘಟಕಗಳು ದೆಹಲಿ ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ದೆಹಲಿ ಹೈಕೋರ್ಟ್‌ನ ಈ ತೀರ್ಪಿನಿಂದ ಕೇಜ್ರಿವಾಲ್‌ ಸರ್ಕಾರಕ್ಕೆ ಬಲ ಸಿಕ್ಕಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT