ಬೆಂಗಳೂರು: ‘ಐಎಸ್ ಭಯೋತ್ಪಾದನಾ ಸಂಘಟನೆಯಲ್ಲಿ ಕರ್ನಾಟಕದ ಯುವಕರು ಇದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ’ ಎಂದು ಗೃಹಸಚಿವ ಡಾ. ಪರಮೇಶ್ವರ್ ಹೇಳಿದರು.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ ಐಎಸ್ ಉಗ್ರರ ದಾಳಿ ಸಂದರ್ಭದಲ್ಲಿ ಸತ್ತವರು ರಾಜ್ಯದವರು ಎಂಬ ಬಗ್ಗೆಯೂ ಖಚಿತವಿಲ್ಲ.
ರಾಜ್ಯದ ಯುವಕರು ಇಂಥ ಸಂಘಟನೆಯೊಂದಿಗೆ ಸಂಪರ್ಕ ಇಟ್ಟುಕೊಂಡ ಬಗ್ಗೆ ನಮ್ಮ ಗಮನಕ್ಕೆ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು. ಈ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ ಎಂದರು.