<p><strong>ಭುವನೇಶ್ವರ (ಪಿಟಿಐ):</strong> ಒಡಿಶಾ ಮಾಜಿ ಮುಖ್ಯಮಂತ್ರಿ ಜೆ.ಬಿ.ಪಟ್ನಾಯಕ್ (89) ಅವರು ಮಂಗಳವಾರ ಬೆಳಿಗ್ಗೆ ತಿರುಪತಿಯಲ್ಲಿ ನಿಧನ ಹೊಂದಿದರು.<br /> <br /> ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಪಟ್ನಾಯಕ್ ತಿರುಪತಿಗೆ ಬಂದಿದ್ದರು. ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.<br /> <br /> ಮೂರು ಬಾರಿ ಒಡಿಶಾ ಮುಖ್ಯಮಂತ್ರಿಯಾಗಿದ್ದ ಅವರು ಅಸ್ಸಾಂನ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.<br /> <br /> ಒಡಿಶಾ ರಾಜ್ಯಪಾಲ ಎಸ್.ಸಿ.ಜಮೀರ್, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಗೌರವಾರ್ಥ ಒಡಿಶಾದಲ್ಲಿ ಒಂದು ವಾರ ಶೋಕಾಚರಣೆ ಘೋಷಿಸಲಾಗಿದೆ. ಮಂಗಳವಾರ ಸರ್ಕಾರಿ ರಜೆ ಘೋಷಿಸಲಾಗಿತ್ತು.<br /> <br /> <strong>ಪತ್ರಕರ್ತರಾಗಿ ವೃತ್ತಿ ಆರಂಭ</strong>: 1952ರಲ್ಲಿ ಪತ್ರಕರ್ತರಾಗಿ ವೃತ್ತಿ ಆರಂಭಿಸಿದ ಅವರು, ಸ್ಥಳೀಯವಾಗಿ ಜನಪ್ರಿಯವಾಗಿ ‘ಪ್ರಜಾತಂತ್ರ’ ಪತ್ರಿಕೆಯಲ್ಲಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.<br /> <br /> 1960ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶಿಸಿ 1971ರಲ್ಲಿ ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. 1973ರಿಂದ 80ರವರೆಗೆ ಇಂದಿರಾಗಾಂಧಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.<br /> <br /> ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ಅವರು 1980ರಿಂದ 89ರವರೆಗೆ ಹಾಗೂ 1995ರಿಂದ 99ರವರೆಗೆ ಒಡಿಶಾ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ ಅಸ್ಸಾಂನ ರಾಜ್ಯಪಾಲರಾಗಿ ನೇಮಕಗೊಂಡಿದ್ದ ಅವರ ಅಧಿಕಾರ ಅವಧಿ ಕಳೆದ ಡಿಸೆಂಬರ್ನಲ್ಲಿ ಮುಕ್ತಾಯವಾಗಿತ್ತು.<br /> <br /> <strong>ಅಪಾರ ಪಾಂಡಿತ್ಯ</strong>: ನಾಲ್ಕು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಅವರು ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ರಾಜಕೀಯ ಕ್ಷೇತ್ರದ ಜೊತೆಗೆ ಸಾಹಿತ್ಯ, ಪತ್ರಿಕೋದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು.<br /> <br /> ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಒಡಿಶಾ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.<br /> <br /> ಮಹಾಭಾರತ, ರಾಮಾಯಣ, ಭಗವದ್ಗೀತೆ ಸೇರಿದಂತೆ ಹಲವು ಪ್ರಮುಖ ಕೃತಿಗಳನ್ನು ಒಡಿಶಾಗೆ ಭಾಷಾಂತರ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ (ಪಿಟಿಐ):</strong> ಒಡಿಶಾ ಮಾಜಿ ಮುಖ್ಯಮಂತ್ರಿ ಜೆ.ಬಿ.ಪಟ್ನಾಯಕ್ (89) ಅವರು ಮಂಗಳವಾರ ಬೆಳಿಗ್ಗೆ ತಿರುಪತಿಯಲ್ಲಿ ನಿಧನ ಹೊಂದಿದರು.<br /> <br /> ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಪಟ್ನಾಯಕ್ ತಿರುಪತಿಗೆ ಬಂದಿದ್ದರು. ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.<br /> <br /> ಮೂರು ಬಾರಿ ಒಡಿಶಾ ಮುಖ್ಯಮಂತ್ರಿಯಾಗಿದ್ದ ಅವರು ಅಸ್ಸಾಂನ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.<br /> <br /> ಒಡಿಶಾ ರಾಜ್ಯಪಾಲ ಎಸ್.ಸಿ.ಜಮೀರ್, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಗೌರವಾರ್ಥ ಒಡಿಶಾದಲ್ಲಿ ಒಂದು ವಾರ ಶೋಕಾಚರಣೆ ಘೋಷಿಸಲಾಗಿದೆ. ಮಂಗಳವಾರ ಸರ್ಕಾರಿ ರಜೆ ಘೋಷಿಸಲಾಗಿತ್ತು.<br /> <br /> <strong>ಪತ್ರಕರ್ತರಾಗಿ ವೃತ್ತಿ ಆರಂಭ</strong>: 1952ರಲ್ಲಿ ಪತ್ರಕರ್ತರಾಗಿ ವೃತ್ತಿ ಆರಂಭಿಸಿದ ಅವರು, ಸ್ಥಳೀಯವಾಗಿ ಜನಪ್ರಿಯವಾಗಿ ‘ಪ್ರಜಾತಂತ್ರ’ ಪತ್ರಿಕೆಯಲ್ಲಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.<br /> <br /> 1960ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶಿಸಿ 1971ರಲ್ಲಿ ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. 1973ರಿಂದ 80ರವರೆಗೆ ಇಂದಿರಾಗಾಂಧಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.<br /> <br /> ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ಅವರು 1980ರಿಂದ 89ರವರೆಗೆ ಹಾಗೂ 1995ರಿಂದ 99ರವರೆಗೆ ಒಡಿಶಾ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ ಅಸ್ಸಾಂನ ರಾಜ್ಯಪಾಲರಾಗಿ ನೇಮಕಗೊಂಡಿದ್ದ ಅವರ ಅಧಿಕಾರ ಅವಧಿ ಕಳೆದ ಡಿಸೆಂಬರ್ನಲ್ಲಿ ಮುಕ್ತಾಯವಾಗಿತ್ತು.<br /> <br /> <strong>ಅಪಾರ ಪಾಂಡಿತ್ಯ</strong>: ನಾಲ್ಕು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಅವರು ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ರಾಜಕೀಯ ಕ್ಷೇತ್ರದ ಜೊತೆಗೆ ಸಾಹಿತ್ಯ, ಪತ್ರಿಕೋದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು.<br /> <br /> ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಒಡಿಶಾ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.<br /> <br /> ಮಹಾಭಾರತ, ರಾಮಾಯಣ, ಭಗವದ್ಗೀತೆ ಸೇರಿದಂತೆ ಹಲವು ಪ್ರಮುಖ ಕೃತಿಗಳನ್ನು ಒಡಿಶಾಗೆ ಭಾಷಾಂತರ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>