ನವದೆಹಲಿ (ಪಿಟಿಐ): ವಲಸೆ ಹೋಗಿರುವ ಕಾಶ್ಮೀರಿ ಪಂಡಿತ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಅನುಕೂಲವಾಗುವಂತೆ ಸೂಕ್ತ ಸ್ಥಳ ಗುರುತಿಸಬೇಕೆಂದು ಸೂಚಿಸಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.
ಸರ್ಕಾರದ ಪುನರ್ವಸತಿ ಯೋಜನೆಯ ಅನುಷ್ಠಾನಕ್ಕೆ ವಲಸಿಗರ ಮೂಲ ಸ್ಥಳಗಳ ಸಮೀಪದಲ್ಲೇ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳ ಗುರುತಿಸಬೇಕಾಗಿದೆ ಎಂದು ಸಿಂಗ್ ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.