<p>ಕಡೂರು: ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಬೆಳೆ ಆಕಸ್ಮಿಕವಾಗಿ ಬೆಂಕಿಗೆ ಸಂಪೂರ್ಣ ಭಸ್ಮವಾದ ಘಟನೆ ತಾಲ್ಲೂಕಿನ ಬಿಳುವಾಲ ಗ್ರಾಮದಲ್ಲಿ ಸೋಮವಾರ ನಡೆದಿದೆ.<br /> <br /> ಮಧ್ಯಾಹ್ನ 2 ಗಂಟೆಗೆ ಬಿಳುವಾಲದ ಕೃಷ್ಣಮೂರ್ತಿ ಅವರಿಗೆ ಸೇರಿದ 7 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರು.<br /> <br /> ಆ ವೇಳೆಗೆ ಬಂದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತಂದಿದ್ದು, ಅಷ್ಟು ಹೊತ್ತಿಗಾಗಲೇ ಸುಮಾರು 4 ಎಕರೆ ಕಬ್ಬು ಬೆಂಕಿಗೆ ಅಹುತಿಯಾಗಿದೆ.<br /> <br /> ಸ್ಥಳಕ್ಕೆ ಕಂದಾಯಾಧಿಕಾರಿ ಸತ್ಯನಾರಾಯಣ್ ಮತ್ತು ಕಸಬಾ ಕೃಷಿ ಅಧಿಕಾರಿ ಲೋಕನಾಥ್ ಭೇಟಿ ನೀಡಿ ಪರಿಶೀಲಿಸಿದರು.<br /> ‘ಎರಡು ದಿನದಲ್ಲಿ ಕಬ್ಬು ಕಟಾವು ಮಾಡಲು ಸಿದ್ಧತೆ ನಡೆಸಿದ್ದ ಸಮಯದಲ್ಲಿ ಕಬ್ಬು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ನಮ್ಮ ದುರದೃಷ್ಟ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದಿದ್ದೆ.<br /> <br /> ಈಗ ಏನು ಮಾಡುವುದು ಎಂದು ದಿಕ್ಕು ತೋಚದಂತಾಗಿದೆ. ₨4 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕಬ್ಬು ಬೆಂಕಿಗೆ ಅಹುತಿಯಾಗಿದೆ’ ಕೃಷಿಕ ಕೃಷ್ಣಮೂರ್ತಿ ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಡೂರು: ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಬೆಳೆ ಆಕಸ್ಮಿಕವಾಗಿ ಬೆಂಕಿಗೆ ಸಂಪೂರ್ಣ ಭಸ್ಮವಾದ ಘಟನೆ ತಾಲ್ಲೂಕಿನ ಬಿಳುವಾಲ ಗ್ರಾಮದಲ್ಲಿ ಸೋಮವಾರ ನಡೆದಿದೆ.<br /> <br /> ಮಧ್ಯಾಹ್ನ 2 ಗಂಟೆಗೆ ಬಿಳುವಾಲದ ಕೃಷ್ಣಮೂರ್ತಿ ಅವರಿಗೆ ಸೇರಿದ 7 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರು.<br /> <br /> ಆ ವೇಳೆಗೆ ಬಂದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತಂದಿದ್ದು, ಅಷ್ಟು ಹೊತ್ತಿಗಾಗಲೇ ಸುಮಾರು 4 ಎಕರೆ ಕಬ್ಬು ಬೆಂಕಿಗೆ ಅಹುತಿಯಾಗಿದೆ.<br /> <br /> ಸ್ಥಳಕ್ಕೆ ಕಂದಾಯಾಧಿಕಾರಿ ಸತ್ಯನಾರಾಯಣ್ ಮತ್ತು ಕಸಬಾ ಕೃಷಿ ಅಧಿಕಾರಿ ಲೋಕನಾಥ್ ಭೇಟಿ ನೀಡಿ ಪರಿಶೀಲಿಸಿದರು.<br /> ‘ಎರಡು ದಿನದಲ್ಲಿ ಕಬ್ಬು ಕಟಾವು ಮಾಡಲು ಸಿದ್ಧತೆ ನಡೆಸಿದ್ದ ಸಮಯದಲ್ಲಿ ಕಬ್ಬು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ನಮ್ಮ ದುರದೃಷ್ಟ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದಿದ್ದೆ.<br /> <br /> ಈಗ ಏನು ಮಾಡುವುದು ಎಂದು ದಿಕ್ಕು ತೋಚದಂತಾಗಿದೆ. ₨4 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕಬ್ಬು ಬೆಂಕಿಗೆ ಅಹುತಿಯಾಗಿದೆ’ ಕೃಷಿಕ ಕೃಷ್ಣಮೂರ್ತಿ ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>