ನವದೆಹಲಿ (ಐಎಎನ್ಎಸ್): ವಿದೇಶಿ ಬ್ಯಾಂಕುಗಳಲ್ಲಿ ಇಡಲಾಗಿರುವ ಕಪ್ಪು ಹಣವನ್ನು ಪತ್ತೆಹಚ್ಚಿ ವಾಪಸ್ ತರಿಸುವ ಬಗ್ಗೆ ಸಲಹೆ– ಸೂಚನೆಗಳನ್ನು ನೀಡಲು ರಚಿಸಲಾಗಿರುವ ವಿಶೇಷ ತನಿಖಾ ತಂಡದ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಷಾ ಅವರನ್ನು ಸುಪ್ರೀಂಕೋರ್ಟ್ ನೇಮಕ ಮಾಡಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ಪಿ. ಜೀವನ್ ರೆಡ್ಡಿ ಅವರು ವೈಯಕ್ತಿಕ ಕಾರಣಗಳಿಗಾಗಿ ಎಸ್ಐಟಿ ಅಧ್ಯಕ್ಷ ಸ್ಥಾನ ನಿರ್ವಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರಿಂದ ಉಪಾಧ್ಯಕ್ಷರಾಗಿದ್ದ ಷಾ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಪ್ರೀಂಕೊರ್ಟ್ ನಿವೃತ್ತ ನ್ಯಾಯಮೂರ್ತಿ ಅರಿಜಿತ್ ಪಸಾಯತ್ ಅವರನ್ನು ಎಸ್ಐಟಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.