ನವದೆಹಲಿ (ಪಿಟಿಐ): ಸಂಸದೀಯ ವ್ಯವಹಾರಗಳ ಮಾಜಿ ಸಚಿವರೂ ಆಗಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಕಮಲನಾಥ್ ಅವರು ನೂತನ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಕೆಳಮನೆಯ ಅತ್ಯಂತ ಹಿರಿಯ ಸದಸ್ಯರಾಗಿರುವ ಕಮಲನಾಥ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವಂತೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಸರ್ಕಾರ ಶಿಫಾರಸು ಮಾಡಿದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ನೂತನ ಸ್ಪೀಕರ್ಗಾಗಿ ಚುನಾವಣೆ ನಡೆಯುವ ವರೆಗೂ ಹಂಗಾಮಿ ಸ್ಪೀಕರ್ ಅವರು ಲೋಕಸಭಾಧ್ಯಕ್ಷರ ಕಾರ್ಯಗಳನ್ನು ನಿರ್ವಹಿಸುತ್ತಾರೆ.