ಹೆಣ್ಣೂರು: ಕ್ರೈಸ್ತ ಸನ್ಯಾಸಿನಿ ತರಬೇತಿಗೆ ಬಂದಿದ್ದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಮಾಹಿತಿ ಪಡೆಯಲು ನಗರದ ನೂತನ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಅವರು ಹೆಣ್ಣೂರು ಸಮೀಪದ ಭೈರವೇಶ್ವರನಗರದ ಸೆಮಿನರಿಗೆ ಶುಕ್ರವಾರ ಭೇಟಿ ನೀಡಿದರು.
ಅತ್ಯಾಚಾರಕ್ಕೊಳಗಾದ ಬಾಲಕಿ ಹಾಗೂ ಇತರೆ ಸನ್ಯಾಸಿನಿಯರ ಜತೆ ಸುಮಾರು 30 ನಿಮಿಷ ಮಾತುಕತೆ ನಡೆಸಿದ ಅವರು, ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಭರವಸೆ ಕೊಟ್ಟರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಕಮಿಷನರ್, ‘ಬಾಲಕಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾಳೆ. ಇಬ್ಬರು ಇನ್ಸ್ಪೆಕ್ಟರ್ಗಳ ತಂಡ ಆರೋಪಿಗಳ ಪತ್ತೆಯಲ್ಲಿ ತೊಡಗಿದೆ. 3–4 ದಿನಗಳಲ್ಲಿ ಪ್ರಕರಣದ ಬಗ್ಗೆ ಸ್ಪಷ್ಟತೆ ಸಿಗಲಿದೆ’ ಎಂದರು.
ಬಾಲಕಿ ಆಂಧ್ರಪ್ರದೇಶ ಮೂಲದವಳು. ಸಂಬಂಧಿಕರ ಹೇಳಿಕೆ ಪಡೆ ಯಲು ಒಂದು ತಂಡವನ್ನು ಆಂಧ್ರ ಪ್ರದೇಶಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.