ನವದೆಹಲಿ (ಪಿಟಿಐ): ಆಹಾರ ಮತ್ತು ಹಾಲು ಕಲಬೆರೆಕೆ ಹಾವಳಿಗೆ ಕಡಿವಾಣ ಹಾಕಲು ಈಗಿರುವ ಆಹಾರ ಗುಣಮಟ್ಟ ಹಾಗೂ ಸುರಕ್ಷತೆ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ಸರ್ಕಾರ ಮುಂದಾಗಿದೆ.
ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಕಾನೂನನ್ನು ಸಮಗ್ರವಾಗಿ ಪರಿಶೀಲಿಸಲು ಕಾರ್ಯಪಡೆಯನ್ನು ರಚಿಸಿ 45 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸೋಮವಾರ ಲೋಕಸಭೆಗೆ ತಿಳಿಸಿದರು.
ಅನಿಯಂತ್ರಿತ ಕೀಟನಾಶಕ ಹಾಗೂ ರೋಗನಿರೋಧಕಗಳ ಬಳಕೆಯಿಂದ ಆಹಾರ, ಮಾಂಸ ಮತ್ತು ಹಾಲಿನಲ್ಲಿ ಹೆಚ್ಚಾಗುತ್ತಿರುವ ವಿಷಯುಕ್ತ ಪದಾರ್ಥಗಳು ಜೀವಕ್ಕೆ ಮಾರಕವಾಗಿ ಪರಿಣಮಿಸಿವೆ ಎಂದು ನಡ್ಡಾ ಕಳವಳ ವ್ಯಕ್ತಪಡಿಸಿದರು.