ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸರಿಯಾಗಿ ಹಾಜರಾಗದ ಇತರ 9 ಆರೋಪಿಗಳಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
ಕಾಂಗ್ರೆಸ್ನ ನವೀನ್ ಜಿಂದಾಲ್, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೊಡಾ, ಕೇಂದ್ರ ಮಾಜಿ ಸಚಿವ ದಾಸರಿ ನಾರಾಯಣರಾವ್ ಮತ್ತು ಮಾಜಿ ಕಾರ್ಯದರ್ಶಿ ಹರೀಶ್ ಚಂದ್ರ ಗುಪ್ತ ಸೇರಿದಂತೆ ಏಳು ಜನ ಆರೋಪಿಗಳ ಜಾಮೀನು ಅರ್ಜಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.
ಆರೋಪಿಗಳು ಕೈಗಾರಿಕೋದ್ಯಮಿಗಳು, ರಾಜಕೀಯ ನಾಯಕರು ಆಗಿರುವುದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಿ.ಕೆ ಶರ್ಮಾ ಅವರು ನ್ಯಾಯಾಧೀಶರಾದ ಭರತ್ ಪರಸಾರ್ ಅವರಲ್ಲಿ ಮನವಿ ಮಾಡಿದರು. ಆದರೆ ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿರುವುದರಿಂದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು.