ವಿವರ: 2005ರಲ್ಲಿ ನಡೆದಿದ್ದ ಕಲ್ಲಿದ್ದಲು ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಬಿಐ ನೂತನ ಎಫ್ ಐಆರ್ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 16 ಎಫ್ ಐಆರ್ ದಾಖಲಿಸಲಾಗಿದೆ.
ಆದಿತ್ಯ ಬಿರ್ಲಾ ಗ್ರೂಪ್ ಒಡೆತನದ ಹಿಂಡಲ್ಕೊ ಕಂಪೆನಿ ಕಲ್ಲಿದ್ದಲು ಖರೀದಿಯಲ್ಲಿ ಅವ್ಯವಹಾರ ನಡೆಸಿರುವುದರ ಬಗ್ಗೆ ಸಿಬಿಐಗೆ ಸ್ಪಷ್ಟ ಸಾಕ್ಷ್ಯಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಬಿರ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿದ್ದವು.
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಕುರಿತು ಸಿಬಿಐ ತನಿಖೆ ನಡೆಸುತ್ತಿರುವ 16 ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಿದ ಮೊದಲ ಪ್ರಕರಣ (ನವಭಾರತ್ ಪವರ್ ಕಂಪೆನಿ) ಇದಾಗಿದೆ. ಬಹುಕೋಟಿ ರೂಪಾಯಿಗಳ ಈ ಹಗರಣದಲ್ಲಿ ಅನೇಕ ಕಂಪೆನಿಗಳು ಮತ್ತು ಉನ್ನತ ಮಟ್ಟದ ಕಾರ್ಪೊರೇಟ್ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.
ಈ ಪಟ್ಟಿಯಲ್ಲಿ ಕುಮಾರ ಮಂಗಳಂ ಬಿರ್ಲಾ, ಕಾಂಗ್ರೆಸ್ ಸಂಸದ ನವೀನ್ ಜಿಂದಾಲ್ ಅವರ ಹೆಸರೂ ಇದ್ದವು.