ಮುಂಬೈ (ಪಿಟಿಐ): ಆದರ್ಶ ಗೃಹ ನಿರ್ಮಾಣ ಸಂಘದ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಕಳಂಕ ಹೊತ್ತು ಎರಡು ವರ್ಷಗಳ ಹಿಂದೆ ಅಮಾನತುಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಜೈರಾಜ್ ಪಾಠಕ್ ಮತ್ತು ಪ್ರದೀಪ್ ವ್ಯಾಸ್ ಅವರ ಅಮಾನತನ್ನು ರದ್ದುಪಡಿಸಲಾಗಿದೆ.
ಈ ಅಧಿಕಾರಿಗಳನ್ನು ಸೂಕ್ತ ಹುದ್ದೆಯಲ್ಲಿ ನಿಯೋಜಿಸಲಾಗುವುದು ಹಾಗೂ ಅವರ ವಿರುದ್ಧದ ವಿಚಾರಣೆ ಮುಂದುವರಿಯಲಿದೆ ಎಂದು ಮುಖ್ಯ ಕಾರ್ಯದರ್ಶಿ ಜೆ. ಎಸ್. ಶಹಾರಿಯಾ ತಿಳಿಸಿದ್ದಾರೆ.