ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸದ ರಾಶಿ ತೆರವುಗೊಳಿಸಿ

ಕುಂದು ಕೊರತೆ
ಅಕ್ಷರ ಗಾತ್ರ

ಜೆ.ಪಿ.ನಗರ 2ನೇ ಹಂತದಲ್ಲಿರುವ ದೇವಿ ದೇವಸ್ಥಾನದ ಹಿಂಭಾಗದಲ್ಲಿರುವ ಆವರಣದಲ್ಲಿ ಪ್ಲಾಸ್ಟಿಕ್‌, ಕೊಳೆತ ತರಕಾರಿ, ಹೂವಿನ ಮಾಲೆಗಳನ್ನು ಎಸೆದಿದ್ದು, ಅವು  ಅಲ್ಲೆ ಕೊಳೆತು ದುರ್ನಾತ ಬೀರುತ್ತಿದೆ. ದೇವಾಲಯಕ್ಕೆ ಸಮೀಪವಿರುವ ಈ ಕಸದ ರಾಶಿಯಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ತೊಂದರೆ ಅನುಭವಿಸುವಂತಾಗಿದೆ.

ಈಗ ಮಳೆಗಾಲ ಆರಂಭವಾಗಿದೆ. ಅಲ್ಲಿನ ಕಸದ ರಾಶಿಯನ್ನು ಹಾಗೆಯೇ ಬಿಟ್ಟರೆ ಅದು ಮಲೇರಿಯಾ ಹಾಗೂ ಮತ್ತಿತರ ರೋಗಗಳನ್ನು ಹರಡಲು ಕಾರಣವಾಗಬಹುದು. ಆದ್ದರಿಂದ ಆದಷ್ಟು ಬೇಗ ಈ ಕಸದ ರಾಶಿಯನ್ನು ತೆರವುಗೊಳಿಸಿ ಈ ಜಾಗವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT