ಕೊಲ್ಲಾಪುರ (ಪಿಟಿಐ): ಕಸ್ತೂರಿರಂಗನ್ ವರದಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಇದಕ್ಕೆ ಸಂಬಂಧಿಸಿದ ಎಲ್ಲರ ಅಭಿಪ್ರಾಯ ಪಡೆಯಲಾಗುವುದು ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ‘ಈ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ನಮಗೆ ಅಭಿವೃದ್ಧಿ ಬೇಕು. ಆದರೆ, ಪರಿಸರ ನಾಶ ಬೇಕಿಲ್ಲ’ ಎಂದರು.