ಗಾಂಧಿನಗರದ ಸಿಂಡಿಕೇಟ್ ಬ್ಯಾಂಕ್ ರಸ್ತೆ ಹಾಗೂ ಸುಖ ಸಾಗರ್ ಹೋಟೆಲ್ ಹಿಂಭಾಗದಲ್ಲಿರುವ ರಸ್ತೆಯಲ್ಲಿ ಬಹಳ ದಿನಗಳಿಂದ ಕಸ ವಿಲೇವಾರಿ ಆಗದೆ ಪಾದಚಾರಿಗಳಿಗೆ ಹಾಗೂ ಇತರೆ ಜನಗಳಿಗೆ ತೊಂದರೆ ಆಗುತ್ತಿದೆ. ಈ ಸಮಸ್ಯೆ ಜನರ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.
ದಿನವೂ ಬರುವ ಕಸ ವಿಲೇವಾರಿ ವಾಹನಗಳು ಅರ್ಧ ಕಸವನ್ನು ಮಾತ್ರ ತುಂಬಿಕೊಂಡು ಉಳಿದ ಕಸವನ್ನು ಹಾಗೆಯೇ ಬಿಟ್ಟು ಹೋಗುತ್ತಾರೆ. ಇದಕ್ಕೆ ಕಾರಣ ಏನು ಎಂಬುದು ಗೊತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಇತ್ತ ಗಮನ ಹರಿಸಿ, ಈ ಸ್ಥಳದಲ್ಲಿ ಬೀಳುವ ಕಸವನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಿಸಿ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಮನವಿ.