ನವದೆಹಲಿ (ಪಿಟಿಐ): ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಹಠಾತ್ ಬದಲಾವಣೆ ರಾಜಕೀಯ ಬಣ್ಣ ಬಳಿದುಕೊಂಡಿದ್ದು, ಈ ವಿವಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೊಂದು ಸಂಘರ್ಷಕ್ಕೆ ನಾಂದಿ ಹಾಡಿದೆ.
ಇನ್ನೂ ಎಂಟು ತಿಂಗಳು ಅಧಿಕಾರ ಅವಧಿ ಇರುವಾಗಲೇ ಸುಜಾತಾ ಸಿಂಗ್ ಅವರನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಿದ ನಿರ್ಧಾರದ ಹಿಂದಿರುವ ಉದ್ದೇಶ ಸ್ಪಷ್ಟಪಡಿಸುವಂತೆ ಕಾಂಗ್ರೆಸ್ ಕೇಳಿದೆ.
ಹಿರಿಯ ಮಹಿಳಾ ಅಧಿಕಾರಿಯೊಬ್ಬರನ್ನು ಕಾರಣವಿಲ್ಲದೆ ಹಠಾತ್ ಬದಲಾವಣೆ ಮಾಡಿರುವ ಸರ್ಕಾರದ ಕ್ರಮ ಹಲವಾರು ಶಂಕೆಗಳಿಗೆ ಕಾರಣವಾಗಿದೆ. ಕೇಂದ್ರ ಈ ಕುರಿತು ಜನತೆಗೆ ವಿವರಣೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಸರ್ಕಾರದ ಈ ನಿರ್ಧಾರದ ಹಿಂದೆ ರಾಜಕೀಯದ ವಾಸನೆ ಕಂಡುಬರುತ್ತಿದೆ. ಎನ್ಡಿಎ ಅಧಿಕಾರಕ್ಕೆ ಬಂದ ನಂತರ ಡಿಆರ್ಡಿಒ,
ದೊಡ್ಡ ಜವಾಬ್ದಾರಿ, ಉನ್ನತ ಗೌರವ | ನಾನೇ ಬಿಡುಗಡೆ ಕೋರಿದ್ದೆ |
---|---|
ವಿದೇಶಾಂಗ ಕಾರ್ಯದರ್ಶಿ ಹುದ್ದೆ ನಿಜಕ್ಕೂ ದೊಡ್ಡ ಜವಾಬ್ದಾರಿ ಹಾಗೂ ನನಗೆ ದೊರೆತ ಉನ್ನತ ಗೌರವ. ಸರ್ಕಾರದ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವುದು ನನ್ನ ಧರ್ಮ – ಎಸ್. ಜೈಶಂಕರ್, ಹೊಸ ವಿದೇಶಾಂಗ ಕಾರ್ಯದರ್ಶಿ |
‘ಸತತ 38 ವರ್ಷಗಳ ಸರ್ಕಾರಿ ಸೇವೆಯಲ್ಲಿ ದಣಿದು, ರಾಜೀನಾಮೆಗೆ ನಿರ್ಧರಿಸಿದ್ದೆ. ಹೀಗಾಗಿ ಅವಧಿಗೂ ಮುನ್ನವೇ ಸೇವೆಯಿಂದ ಬಿಡುಗಡೆ ಮಾಡುವಂತೆ ಕೋರಿ ನಾನೇ ಪತ್ರ ಬರೆದಿದ್ದೆ’ – ಸುಜಾತಾ ಸಿಂಗ್ |
ಎಸ್ಪಿಜಿ ಹಾಗೂ ಐಐಎಂ ಮುಖ್ಯಸ್ಥರನ್ನು ಒಬ್ಬರ ನಂತರ ಒಬ್ಬರಂತೆ ಕಾರಣವಿಲ್ಲದೇ ಬದಲಾವಣೆ ಮಾಡಿದೆ.
ಈಗ ಮಹಿಳಾ ವಿದೇಶಾಂಗ ಕಾರ್ಯದರ್ಶಿಯ ಸರದಿ. ಅಧಿಕಾರಿಗಳನ್ನು ವಿನಾಕಾರಣ ಬದಲಾವಣೆ ಮಾಡುವ ಮೂಲಕ ಸರ್ಕಾರ ಏನು ಸಾಧಿಸಲು ಹೊರಟಿದೆ ಎಂದು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಕುಟುಕಿದೆ.
ಸಮರ್ಥನೆ: ಸುಜಾತಾ ಸಿಂಗ್ ಎತ್ತಂಗಡಿಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ಕೇಂದ್ರ ಸರ್ಕಾರದ ನಿರ್ಧಾರದ ಹಿಂದೆ ಯಾವ ರಾಜಕೀಯ ಉದ್ದೇಶವೂ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ವಿವೇ-ಚನೆ-ಯಿಂದಲೇ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಅಧಿಕಾರ-ದಲ್ಲಿದ್ದ ಕಾಂಗ್ರೆಸ್ ಕೂಡ ಇಂತಹ ಹಲವಾರು ಬದಲಾವಣೆಯ ನಿರ್ಧಾರ ಕೈಗೊಂಡ ನಿದರ್ಶನಗಳಿವೆ ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ತಿರುಗೇಟು ನೀಡಿದ್ದಾರೆ.
‘ಖಡಕ್ ಅಧಿಕಾರಿಗೆ ಕೊಡುಗೆ’
ಅಮೆರಿಕದಲ್ಲಿ ರಾಜತಾಂತ್ರಿಕ ಅಧಿಕಾರಿಯಾಗಿದ್ದ ಐಎಫ್-ಎಸ್ ಅಧಿಕಾರಿ ದೇವಯಾನಿ ಖೋಬ್ರಾಗಡೆ ಪ್ರಕರಣದಲ್ಲಿ ಸುಜಾತಾ ಸಿಂಗ್ ತಾಳಿದ ಖಡಕ್ ನಿಲುವಿಗೆ ಕೇಂದ್ರ ಸರ್ಕಾರ ಈ ಕೊಡುಗೆ ನೀಡಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ವ್ಯಕ್ತಿಗಿಂತ ಸಂಸ್ಥೆ ಮುಖ್ಯ |
---|
‘ಸಮರ್ಪಕವಾಗಿ ಹುದ್ದೆ ನಿರ್ವಹಿಸಿದ ತೃಪ್ತಿ ನನಗಿದೆ. ಒಬ್ಬ ವ್ಯಕ್ತಿ ಒಂದು ಸಂಸ್ಥೆ ಅಥವಾ ವ್ಯವಸ್ಥೆ ಬೆಳೆಸಬಹುದು. ಹಾಗೆಂದ ಮಾತ್ರಕ್ಕೆ ಆ ವ್ಯಕ್ತಿ ಎಂದಿಗೂ ಸಂಸ್ಥೆಗಿಂತ ದೊಡ್ಡವನಾಗಲಾರ. ಸಂಸ್ಥೆ ಮುಖ್ಯವೇ ಹೊರತು ವ್ಯಕ್ತಿ ಅಲ್ಲ’ ಎಂದು ಅವರು ಹೇಳಿಕೊಂಡಿದ್ದಾರೆ. 2013ರಲ್ಲಿ ಮೂರನೇ ಮಹಿಳಾ ವಿದೇಶಾಂಗ ಕಾರ್ಯ-ದರ್ಶಿ-ಯಾಗಿ ಅಧಿಕಾರ ಸ್ವೀಕರಿಸಿದ್ದ ಸುಜಾತಾ ಸಿಂಗ್ ಅಧಿಕಾರ ಅವಧಿ ಇನ್ನೂ ಎಂಟು ತಿಂಗಳು ಇರುವಾಗಲೇ ಕೇಂದ್ರ ಸರ್ಕಾರ ಅವರನ್ನು ಬದಲಾವಣೆ ಮಾಡಿರುವುದು ಅವರಿಗೆ ತೀವ್ರ ಅಸಮಾಧಾನ ತಂದಿದೆ ಎನ್ನಲಾಗಿದೆ. ಇದರಿಂದಾಗಿ ಅಧಿ-ಕಾರ ಹಸ್ತಾಂತರ ಸಂದರ್ಭದಲ್ಲಿ ಅವರು ಗೈರು ಹಾಜರಾಗಿದ್ದರು. |
ಇನ್ನೂ ಎಂಟು ತಿಂಗಳು ಅಧಿಕಾರಾವಧಿ ಇರುವಾಗಲೇ ತರಾ-ತುರಿ-ಯಲ್ಲಿ ವಿದೇಶಾಂಗ ಕಾರ್ಯದರ್ಶಿ ಹುದ್ದೆಯಿಂದ ಸುಜಾತಾ ಸಿಂಗ್ ಅವರನ್ನು ಎತ್ತಂಗಡಿ ಮಾಡಿರುವುದರ ಹಿಂದಿನ ಉದ್ದೇಶ ಸ್ಪಷ್ಟಪಡಿಸುವಂತೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಸವಾಲು ಹಾಕಿದ್ದಾರೆ.
ಸುಜಾತಾ ಸಿಂಗ್ ಎತ್ತಂಗಡಿ ಏಕೆ?
ವಿದೇಶಾಂಗ ವ್ಯವಹಾರಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವಧಿಗೂ ಮುನ್ನವೇ ಸುಜಾತಾ ಸಿಂಗ್ ಅವರನ್ನು ಬದಲಾವಣೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಈ ಬೆಳವಣಿಗೆಯಿಂದ ಸುಜಾತಾ ಸಂಪೂರ್ಣ ಹತಾಶರಾಗಿದ್ದಾರೆ ಎಂದೂ ಮೂಲಗಳು ತಿಳಿಸಿವೆ.
ಜೈಶಂಕರ್ ಅಧಿಕಾರ ಸ್ವೀಕಾರ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿದ್ದ ಹಿರಿಯ ಐಎಫ್ಎಸ್ ಅಧಿಕಾರಿ ಎಸ್. ಜೈಶಂಕರ್ ಗುರುವಾರ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. |
ಅಸಮರ್ಥ ಕಾರ್ಯನಿರ್ವಹಣೆ ಮತ್ತು ಅತಿಯಾದ ಪ್ರಚಾರ ಪ್ರಿಯತೆ ಅವರ ಹುದ್ದೆಯನ್ನು ಬಲಿಪಡೆಯಿತು. ಸುಜಾತಾ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದ ಕೇಂದ್ರ ಸರ್ಕಾರ, ರಾಜೀನಾಮೆ ನೀಡಿ ನಿರ್ಗಮಿಸುವಂತೆ ಹಲವಾರು ಬಾರಿ ಪರೋಕ್ಷವಾಗಿ ಸೂಚನೆ ನೀಡುತ್ತಲೇ ಬಂದಿತ್ತು. ಆದರೆ, ಸರ್ಕಾರದ ಇಂಗಿತವನ್ನು ಗಂಭೀರವಾಗಿ ತೆಗೆದುಕೊಳ್ಳದ ಸುಜಾತಾ ಸಿಂಗ್ ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ಸುಷ್ಮಾ ಸ್ಪಷ್ಟನೆ: ‘ಜೈಶಂಕರ್ ಅವರನ್ನು ನೂತನ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ಮಾಡುವ ಸರ್ಕಾರದ ನಿರ್ಧಾರವನ್ನು ಸುಜಾತಾ ಸಿಂಗ್ ಅವರಿಗೆ ಖುದ್ದಾಗಿ ತಿಳಿಸಿದ್ದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರ ಸ್ವತಃ ಸುಜಾತಾ ಅವರಿಗೆ ಗೊತ್ತಿರಲಿಲ್ಲ ಎನ್ನುವ ವರದಿಗಳ ಬೆನ್ನಲ್ಲಿಯೇ ಸುಷ್ಮಾ ಈ ರೀತಿ ಟ್ವೀಟ್ ಮಾಡಿದ್ದಾರೆ.
ಜೈಶಂಕರ್ ಅವರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ತೆಗೆದುಕೊಂಡ ದಿಢೀರ್ ನಿರ್ಧಾರವನ್ನು ಸಮರ್ಥಿಸಿಕೊಂಡ ಸುಷ್ಮಾ, ‘ ಜೈಶಂಕರ್ ಜ.೩೧ರಂದು ನಿವೃತ್ತಿಯಾಗಲಿದ್ದರು. ಅದಕ್ಕೂ ಮೊದಲೇ ನಾವು ಅವರ ನೇಮಕಾತಿ ಆದೇಶ ಹೊರಡಿಸಬೇಕಾಗಿತ್ತು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.