ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ತ್ಯಜಿಸಿದ್ದೇನೆ: ಷರೀಫ್

Last Updated 16 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಈಗಾಗಲೇ ಕಾಂಗ್ರೆಸ್‌ನಿಂದ ಹೊರಗೆ ಬಂದಿದ್ದೇನೆ. ಆ ಪಕ್ಷದ ಜೊತೆ ನನಗೆ ಯಾವ ಸಂಬಂಧವೂ ಇಲ್ಲ’ ಎಂದು ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್‌ ಷರೀಫ್‌ ಹೇಳಿದರು.

ಬೆಂಗಳೂರು ಉತ್ತರ ಲೋಕ­ ಸಭಾ ಕ್ಷೇತ್ರದ ಸಿ.ನಾರಾಯಣ­ಸ್ವಾಮಿ ಅವರು ಬುಧವಾರ ಸಂಜೆ ಯಲಹಂಕ ಸಮೀಪದ ಕೋಗಿಲು ಕ್ರಾಸ್‌ನಲ್ಲಿರುವ ಜಾಫರ್‌ ಷರೀಫ್‌ ಅವರ ತೋಟದ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಷರೀಫ್‌, ಕಾಂಗ್ರೆಸ್‌ ಪಕ್ಷದಿಂದ ಹೊರ ಬಂದಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದರು.

ಗೌಡರಿಗೆ ಮಾತ್ರ ಬೆಂಬಲ: ‘ಈ ಚುನಾವಣೆಯಲ್ಲಿ ನಾನು ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡಿಲ್ಲ. ಆದರೆ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರಿಗೆ ಮಾತ್ರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲ ನೀಡಿದ್ದೇನೆ. ಗೌಡರು ಒಬ್ಬ ಹೋರಾಟದ ರಾಜಕಾರಣಿ. ಈ ಕಾರಣಕ್ಕಾಗಿ ಅವರನ್ನು ಬೆಂಬಲಿಸುತ್ತಿದ್ದೇನೆ’ ಎಂದರು.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದಾಗಿಯೇ ನನಗೆ ಲೋಕಸಭಾ ಚುನಾವಣೆ ಟಿಕೆಟ್‌ ಕೈತಪ್ಪಿದೆ. ಇದಕ್ಕೆ ಬೇರೆ ಯಾರೂ ಕಾರಣರಲ್ಲ.
- ಜಾಫರ್‌ ಷರೀಫ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT