ಚನ್ನಪಟ್ಟಣ: ತಾಲ್ಲೂಕಿನ ಎಲ್ಲಾ ಐದು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಹೊಂಗನೂರು, ತಗಚಗೆರೆ, ದೊಡ್ಡನಹಳ್ಳಿ, ಮಲ್ಲುಂಗೆರೆ, ಬ್ರಹಣೀಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ರೋಡ್ ಷೋ ನಡೆಸಿ ಮತಯಾಚನೆ ಮಾಡಿದ ಯೋಗೇಶ್ವರ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ತಾಲ್ಲೂಕಿನಲ್ಲಿ ನಡೆದಿರುವ ನೀರಾವರಿ ಕಾಮಗಾರಿಗಳು ಕಾಂಗ್ರೆಸ್ಗೆ ಗೆಲುವು ತಂದು ಕೊಡಲಿದೆ ಎಂದರು.
ತಾಲ್ಲೂಕಿನಲ್ಲಿ ನಡೆಸಿರುವ ಅಭಿವೃದ್ಧಿಯ ಕಾರ್ಯಗಳನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡುತ್ತಿದ್ದೇವೆ. ಜನತೆಗೆ ಎಲ್ಲಾ ತಿಳಿದಿದೆ. ಹಾಗಾಗಿ ಜನತೆ ಕಾಂಗ್ರೆಸ್ ಪಕ್ಷವನ್ನು ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಹೇಳಿದರು. ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ವೀಣಾಕುಮಾರಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.