ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು ‘ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಅನುಗುಣವಾಗಿ ಕರ್ನಾಟಕ ನೀರು ಬಿಡುವ ಬದಲಿಗೆ, ತಮ್ಮ ವ್ಯಾಪ್ತಿಯ ಜಲಾಶಯಗಳಲ್ಲಿರುವ ಎಲ್ಲಾ ನೀರು ತಮ್ಮದೇ ಎಂಬಂತೆ ಬಳಸಿಕೊಳ್ಳುವುದನ್ನು ಮುಂದುವರಿಸಿದೆ. ಇದರಿಂದ ತಮಿಳುನಾಡಿನ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ನ್ಯಾಯಮಂಡಳಿ ನಿಗದಿ ಪಡಿಸಿರುವ ಷರತ್ತುಗಳಿಂದ ನುಣಚಿಕೊಳ್ಳುತ್ತಿರುವ ಕರ್ನಾಟಕ, ನೀರು ಬಿಡುಗಡೆಯ ವಿಷಯದಲ್ಲಿ ಉದ್ದೇಶಪೂರ್ವಕ ಲೋಪ ಎಸಗುತ್ತಿದೆ. ಈ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದೂ ತಮಿಳುನಾಡು ಒತ್ತಾಯಿಸಿದೆ.