ಶ್ರೀನಗರ (ಪಿಟಿಐ): ಭಾರತೀಯ ಸೇನಾ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಸಾವನ್ನಪ್ಪಿದ್ದು, ಮತ್ತೊಂದು ಘಟನೆಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿರುವ ಘಟನೆ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಅರಣ್ಯದಲ್ಲಿ ಸೋಮವಾರ ನಡೆದಿದೆ.
ಉಗ್ರರು ನುಸುಳಿರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಹಂದ್ವಾರ ಅರಣ್ಯ ಪ್ರದೇಶದಲ್ಲಿ ಸೇನೆಯು ಭಾನುವಾರ ರಾತ್ರಿಯಿಂದ ತಪಾಸಣಾ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ಬೆಳಗ್ಗೆ ಉಗ್ರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಮೃತಪಟ್ಟಿರುವುದನ್ನು ಸೇನೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮೃತ ಉಗ್ರನ ಗುರುತು ಹಾಗೂ ಯಾವ ಸಂಘಟನೆಗೆ ಸೇರಿದವನು ಎಂಬುದು ಇದುವರೆಗೆ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.