ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ನ ಕನ್ನಡ ಸಾಹಿತ್ಯ ಸಮ್ಮೇಳನವು ಜು.31 ರಂದು ಕೆಂಗೇರಿಯಲ್ಲಿ ನಡೆಯಲಿದೆ. ಸಮ್ಮೇಳನಾಧ್ಯಕ್ಷರನ್ನಾಗಿ ಡಾ. ಕೂಡ್ಲೂರು ವೆಂಕಟಪ್ಪನವರನ್ನು ಆಯ್ಕೆ ಮಾಡಲಾಗಿದೆ.
ಡಾ. ಕೂಡ್ಲೂರು ವೆಂಕಟಪ್ಪನವರು ಚನ್ನಪಟ್ಟಣ ತಾಲ್ಲೂಕು ಕೂಡ್ಲೂರು ಗ್ರಾಮದವರು. ವಿಮರ್ಶಕರು, ವಿಚಾರವಂತ ಲೇಖಕರು, ಜನಪದ ಸಾಹಿತ್ಯದಲ್ಲಿ ಹೆಚ್ಚು ಅಧ್ಯಯನ ಮತ್ತು ನೂರಾರು ಲೇಖನಗಳನ್ನು, ಪುಸ್ತಕಗಳನ್ನು ಬರೆದು ಈ ಕ್ಷೇತ್ರದಲ್ಲಿ ಗಮನಸೆಳೆದವರು.
ಸುಮಾರು 50ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ಕುರಿತು ವಿಮರ್ಶೆ ಮಾಡಿರುವರು. ಕೆಂಗೇರಿ ಉಪನಗರದ ಗುರುರಾಜ ಸಭಾ ಭವನದ ಎದುರು, ಬಾಲಗಂಗಾಧರನಾಥ ಸ್ವಾಮೀಜಿ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ. ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ ಮಾಡಲಿದ್ದಾರೆ.