ಬೆಂಗಳೂರು: ಭಾರತೀಯ ಸಣ್ಣ ಮತ್ತು ಮಧ್ಯಮ ವ್ಯಾಪಾರ ಅಭಿವೃದ್ಧಿ ಸಂಸ್ಥೆಗಳ ಸಂಘಟನೆ ಇತ್ತೀಚೆಗೆ ಮುಂಬೈನಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು(ಎಸ್ಎಂಇ) ಮತ್ತು ಬ್ಯಾಂಕಿಂಗ್ ಸಂಸ್ಥೆಗಳ ಸಮಾವೇಶ ಆಯೋಜಿಸಿತ್ತು.
ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿದ್ದ ಕೇಂದ್ರದ ಬೃಹತ್ ಕೈಗಾರಿಕೆಗಳು ಮತ್ತು ಸರ್ಕಾರಿ ಉದ್ಯಮ ಸಂಸ್ಥೆಗಳ ಸಚಿವ ಅನಂತ್ ಗೀತೆ ಅವರು ‘ವಿಶ್ವ ಎಸ್ಎಂಇ ವ್ಯಾಪಾರ ಕೇಂದ್ರ’ವನ್ನು ಉದ್ಘಾಟಿಸಿದರು.
ಇದೇ ವೇಳೆ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೆನರಾ ಬ್ಯಾಂಕ್ ‘ಎಂಎಸ್ಎಂಇ ಪ್ರದರ್ಶನ ಮತ್ತು ರಫ್ತುದಾರರಿಗೆ ಸಾಲ ವಿತರಣೆ’ ಆಯೋಜಿಸಿತ್ತು.
ಕೆನರಾ ಬ್ಯಾಂಕ್ ಅಧ್ಯಕ್ಷ ಆರ್.ಕೆ.ದುಬೆ, ಎಸ್ಎಂಇ ಸಂಸ್ಥೆಗಳ ಸಂಘದ ಅಧ್ಯಕ್ಷ ಚಂದ್ರಕಾಂತ್ ಸಾಲುಂಕೆ ಮತ್ತಿತರರು ಸಮಾರಂಭದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.