ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನ್ನೆಗೆ ಹೊಡೆದವನ ಮನೆಗೆ ಕೇಜ್ರಿವಾಲ್ ಭೇಟಿ

Last Updated 9 ಏಪ್ರಿಲ್ 2014, 11:29 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ) : ಮತದಾನದ ಮುನ್ನಾ ದಿನವಾದ ಬುಧವಾರ ಅಚ್ಚರಿಯ ಬೆಳವಣಿಗೆ ಒಂದರಲ್ಲಿ, ಆಮ್ ಆದ್ಮಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ತಮಗೆ ಕಪಾಳಮೋಕ್ಷ ಮಾಡಿದ ಆಟೋಚಾಲಕ ಲಲಿ  ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಆತನನ್ನು ಕ್ಷಮಿಸಿರುವುದಾಗಿ ತಿಳಿಸಿದ್ದಾರೆ.

ಕೇಜ್ರಿವಾಲ್ ಜತೆಗಿನ ಭೇಟಿ ಬಳಿಕ ಮಾತನಾಡಿದ ಲಲಿ, ‘ನಾನು ತಪ್ಪು ಮಾಡಿದ್ದೇನೆ ನಿಜ. ಆದರೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ಕೆಲವೇ ದಿನದಲ್ಲಿ ರಾಜೀನಾಮೆ ನೀಡಿದರು. ಸರ್ಕಾರ ಎಂದರೆ ಕೇವಲ ಲೋಕ ಪಾಲ ಮಸೂದೆ ಅಷ್ಟೇ ಅಲ್ಲ. ಈ ಕಾರಣಕ್ಕಾಗಿ ನಾನು ಅವರಿಗೆ ಹೊಡೆದೆ’ ಎಂದಿದ್ದಾರೆ.

ಅಲ್ಲದೆ, ಕೇಜ್ರಿವಾಲ್ ಅವರು ಜನತಾ ದರ್ಬಾರ್ ಆಯೋಜಿಸಿದ್ದರು. ಆಗ ಅವರನ್ನು ಭೇಟಿ ಮಾಡುವ ಪ್ರಯತ್ನದಲ್ಲಿ ನನ್ನ ಇಡೀ ದಿನ ವ್ಯರ್ಥವಾಯಿತು. ನಾನು ಅವರನ್ನು ಭೇಟಿ ಮಾಡಲು ಸಾಧ್ಯವೇ ಆಗುವುದಿಲ್ಲವೇನೋ ಎಂದುಕೊಂಡೆ. ಅದೇ ವೇಳೆಗೆ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಬಗ್ಗೆ ಕೇಳಿದೆ. ಸಹಿಸಿಕೊಳ್ಳಲಾಗಲಿಲ್ಲ, ಸಿಟ್ಟಿನಿಂದ ಈ ರೀತಿ ಮಾಡಿದೆ' ಎಂದೂ ಲಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT