ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೇರಿದಂತೆ 24 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಕೆಪಿಎಸ್ಸಿ ಕಾರ್ಯದರ್ಶಿಯಾಗಿ ಸುಬೋಧ್ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಎಸ್ಸಿ ಸುಧಾರಣೆ ಮಾಡುವ ಉದ್ದೇಶದಿಂದ ಮೀನಾ ಅವರನ್ನು ಕಾರ್ಯದರ್ಶಿ ಆಗಿ ನೇಮಿಸಲಾಗಿತ್ತು. ಆದರೆ, ಇದೀಗ ಅವರ ವರ್ಗಾವಣೆ ಅಚ್ಚರಿ ಮೂಡಿಸಿದೆ.
ಸಚಿವ ಸಂಪುಟ ಪುನರ್ರಚನೆ ಬಳಿಕ ಬೃಹತ್ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.