ಬೆಂಗಳೂರು: ಕೆರೆಗಳ ಒತ್ತುವರಿ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.
ಭೋಜನ ವಿರಾಮದ ನಂತರ ಸದನ ಸೇರಿದಾಗ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪ ನಾಯಕ ವೈ.ಎಸ್.ವಿ.ದತ್ತ ಅವರು, ‘ಕೆರೆಗಳ ಒತ್ತುವರಿ ಪ್ರಕರಣವನ್ನು ಸಿಬಿಐಗೆ ವಹಿಸಿ. ವಿದ್ಯುತ್ ಖರೀದಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚಿಸಿ’ ಎಂದರು.
ಜೆಡಿಎಸ್ ಶಾಸಕರು, ಒತ್ತುವರಿಗೆ ಒಳಗಾಗಿರುವ ಕೆರೆಗಳ ಪೋಸ್ಟರ್ಗಳನ್ನು ಹಿಡಿದು ಗಮನ ಸೆಳೆದರು.
ಇನ್ನೊಂದೆಡೆ ಬಿಜೆಪಿ ಸದಸ್ಯರು ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು.