ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿ ದ್ಯಾಲಯದ ಕುಲ ಪತಿಯಾಗಿ ಹಿರಿಯ ಭಾಷಾವಿಜ್ಞಾನಿ ಹಾಗೂ ಜಾನಪದ ವಿದ್ವಾಂಸ ಪ್ರೊ.ಎಚ್. ಎಂ. ಮಹೇಶ್ವರಯ್ಯ ಅವರನ್ನು ರಾಷ್ಟ್ರಪತಿ ನೇಮಕ ಮಾಡಿದ್ದಾರೆ.
2014ರ ಫೆಬ್ರುವರಿ 28ರಂದು ಪ್ರೊ.ಎಸ್.ಎಸ್.ಮೂರ್ತಿ ಅವರ ಅವಧಿ ಮುಕ್ತಾಯವಾಗಿದ್ದರಿಂದ ಈ ಸ್ಥಾನ ತೆರವಾಗಿತ್ತು. ಪ್ರೊ.ಎಂ.ಎನ್. ಸುಧೀಂದ್ರ ರಾವ್ ಪ್ರಭಾರ ಕುಲಪತಿಯಾಗಿದ್ದರು.
ಪರಿಚಯ: ಪ್ರೊ.ಎಚ್.ಎಂ. ಮಹೇಶ್ವರಯ್ಯ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದವರು. ಭಾಷಾ ವಿಜ್ಞಾನ ಹಾಗೂ ಜಾನಪದ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ಮಾಡಿ ದ್ದಾರೆ.
ಶಿವಮೊಗ್ಗದ ಸಹ್ಯಾದ್ರಿ ಕಾಲೇ ಜಿನಲ್ಲಿ ಪದವಿ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1979ರಲ್ಲಿ ಪಿಎಚ್. ಡಿ ಪದವಿ ಪಡೆದು, ಧಾರವಾಡ ವಿ.ವಿ ಯಲ್ಲೇ ಅಧ್ಯಾಪಕ, ಪ್ರವಾಚಕ, ಪ್ರಾಧ್ಯಾ +ಪಕ ಮತ್ತು ಕನ್ನಡ ಅಧ್ಯಯನ ಪೀಠದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.