ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ ನಾಮಪತ್ರ ಸಲ್ಲಿಕೆ

Last Updated 23 ಏಪ್ರಿಲ್ 2014, 10:10 IST
ಅಕ್ಷರ ಗಾತ್ರ

ವಾರಣಾಸಿ (ಪಿಟಿಐ): ಎಎಪಿ ಮುಖಂಡ ಅರವಿಂದ್‌ ಕೇಜ್ರಿವಾಲ್‌ ಅವರು ಬುಧವಾರ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಕೇಜ್ರಿವಾಲ್‌ ಅವರು ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುತ್ತಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ರೋಡ್‌ ಶೋ ನಡೆಸಿ ಮಾತನಾಡಿದ ಕೇಜ್ರಿವಾಲ್‌ ರಾಹುಲ್‌ ಗಾಂಧಿ ಮತ್ತು ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಹೆಲಿಕಾಫ್ಟರ್‌ ಮೂಲಕ ಆಗಮಿಸುವ ನಾಯಕರು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ, ಅವರೆಲ್ಲ ಕೈ ಬಿಸುವ ನಾಯಕರು ಎಂದು ಕೇಜ್ರಿವಾಲ್‌ ಟೀಕಿಸಿದರು.

ನಾನು ನಿಮ್ಮ ನಡುವೆಯೇ ಇದ್ದು ನಿಮ್ಮ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುತ್ತೇನೆ ಎಂದು ಜನರಿಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT