ನವದೆಹಲಿ (ಪಿಟಿಐ): ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿರುವ ಎಎಪಿ, ಬಂಧನ ವಿರೋಧಿಸಿ ಪ್ರಕರಣದ ಪೂರ್ಣ ವಿದ್ಯಮಾನವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ `ಬಾಗಿಲಿನಿಂದ ಬಾಗಿಲಿಗೆ ಸಂಪರ್ಕ' ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲು ಗುರುವಾರ ನಿರ್ಧರಿಸಿತು.
ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಅವರು ಎಎಪಿಯ ಹಲವು ಮುಖಂಡರೊಂದಿಗೆ ಗುರುವಾರ ಬೆಳಿಗ್ಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.