ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‍ ಬಂಧನ; ಎಎಪಿ ಅಭಿಯಾನ

ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಖಂಡನೆ
Last Updated 22 ಮೇ 2014, 10:52 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿರುವ ಎಎಪಿ, ಬಂಧನ ವಿರೋಧಿಸಿ ಪ್ರಕರಣದ ಪೂರ್ಣ ವಿದ್ಯಮಾನವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ `ಬಾಗಿಲಿನಿಂದ ಬಾಗಿಲಿಗೆ ಸಂಪರ್ಕ'  ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲು ಗುರುವಾರ ನಿರ್ಧರಿಸಿತು.

 ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಅವರು ಎಎಪಿಯ ಹಲವು ಮುಖಂಡರೊಂದಿಗೆ ಗುರುವಾರ ಬೆಳಿಗ್ಗೆ ನಡೆಸಿದ ಸಭೆಯಲ್ಲಿ  ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

`ಅರವಿಂದ್ ಕ್ರೇಜಿವಾಲ್ ಅವರೊಂದಿಗೆ ನಡೆಸಿದ ಸಭೆಯಲ್ಲಿ ಪಕ್ಷವು ಪ್ರತಿಭಟನೆ ನಡೆಸಬಾರದೆಂದು ತೀರ್ಮಾನ ತೆಗೆದುಕೊಳ್ಳಲಾಯಿತು. ಕೇಜ್ರಿವಾಲ್ ಅವರಂತಹ ಪ್ರಾಮಾಣಿಕ ವ್ಯಕ್ತಿ ಹೇಗೆ ಜೈಲು ಸೇರುವಂತಾಯಿತು ಎಂಬುದನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ `ಬಾಗಿಲಿನಿಂದ ಬಾಗಿಲಿಗೆ' ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು' ಎಂದು ಎಎಪಿಯ ಹಿರಿಯ ಮುಖಂಡ ಅಶುತೋಷ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT