<p><strong>ನವದೆಹಲಿ (ಐಎಎನ್ಎಸ್): </strong>ಸಾಂವಿಧಾನಿಕ ಸ್ಥಾನವನ್ನು ಹೊಂದಿರುವಾಗ ಧರಣಿ ನಡೆಸುವ ಮೂಲಕ ಕಾನೂನು ಉಲ್ಲಂಘಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್, ಶುಕ್ರವಾರ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.</p>.<p>ನ್ಯಾಯಮೂರ್ತಿ ಆರ್ ಎಂ ಲೋಧಾ ನೇತೃತ್ವದ ಪೀಠ, ಗೃಹ ಕಾರ್ಯದರ್ಶಿ ಮೂಲಕ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತು. ಈ ವೇಳೆ, ವಕೀಲರೂ ಆಗಿರುವ ಅರ್ಜಿದಾರ ಎಂ ಎಲ್ ಶರ್ಮಾ ಅವರು ‘ಕಾನೂನು ನಿರೂಪಕರೇ ಕಾನೂನನ್ನು ಮುರಿಯಲು ಸಾಧ್ಯವಿಲ್ಲ’ ಎಂದು ವಾದಿಸಿದರು. ಇದರಿಂದ ಭಿನ್ನ ವ್ಯಕ್ತಿತ್ವಗಳು ಇರಲು ಸಾಧ್ಯವಿಲ್ಲ ಎಂದು ಗಮನಿಸಿದ ಪೀಠ, ದೆಹಲಿ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಿತು.</p>.<p>ನೋಟಿಸ್ಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯ, ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದೆ.</p>.<p>ವಕೀಲ ಎನ್ ರಾಜಾರಾಮನ್ ಅವರು ಸಲ್ಲಿಸಿದ್ದ ಮತ್ತೊಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ಆದೇಶದಲ್ಲಿ ‘ಅಪರಾಧ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾಗಿಯೂ ಕಾನೂನು ಅನುಷ್ಠಾನ ವ್ಯವಸ್ಥೆ/ ಪೊಲೀಸರು, ಐವರು ಅಥವಾ ಅದಕ್ಕೂ ಹೆಚ್ಚು ಜನರು ಅಕ್ರಮವಾಗಿ ಗುಂಪುಗೂಡಲು ಅವಕಾಶ ಏಕೆ ನೀಡಿದ್ದರು’ ಎಂದು ಕೇಳಿತು.</p>.<p>‘ಅಕ್ರಮವಾಗಿ ಜಮಾವಣೆಗೊಂಡ ಜನರನ್ನು ಚದುರಿಸುವಂತೆ ಹೇಳಿದ ಬಳಿಕ ಅಂತಹ ಗುಂಪನ್ನು ಚದುರಿಸಲು ಪೊಲೀಸರು ಸೂಕ್ತ ಕ್ರಮಕೈಗೊಂಡರೇ ಹಾಗೂ ಅಂತಹ ಆದೇಶದ ಹೊರತಾಗಿಯೂ ಜಮಾವಣೆಗೊಂಡ ಜನರು ಚದುರಲಿಲ್ಲವೇ’ ಎಂದೂ ನ್ಯಾಯಾಲಯ ಪ್ರಶ್ನಿಸಿತು.</p>.<p>ಏತನ್ಮಧ್ಯೆ, ನಿಷೇಧಾಜ್ಞೆ ಅನುಷ್ಠಾನ ಸಂಬಂಧಿ ಎರಡು ಪ್ರಶ್ನೆಗಳಿಗೆ ಉತ್ತರಿಸಲು ಉಭಯ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನ್ಯಾಯಾಲಯ 2014ರ ಜನವರಿ 31ವರೆಗೆ ಕಾಲಾವಕಾಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಸಾಂವಿಧಾನಿಕ ಸ್ಥಾನವನ್ನು ಹೊಂದಿರುವಾಗ ಧರಣಿ ನಡೆಸುವ ಮೂಲಕ ಕಾನೂನು ಉಲ್ಲಂಘಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್, ಶುಕ್ರವಾರ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.</p>.<p>ನ್ಯಾಯಮೂರ್ತಿ ಆರ್ ಎಂ ಲೋಧಾ ನೇತೃತ್ವದ ಪೀಠ, ಗೃಹ ಕಾರ್ಯದರ್ಶಿ ಮೂಲಕ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತು. ಈ ವೇಳೆ, ವಕೀಲರೂ ಆಗಿರುವ ಅರ್ಜಿದಾರ ಎಂ ಎಲ್ ಶರ್ಮಾ ಅವರು ‘ಕಾನೂನು ನಿರೂಪಕರೇ ಕಾನೂನನ್ನು ಮುರಿಯಲು ಸಾಧ್ಯವಿಲ್ಲ’ ಎಂದು ವಾದಿಸಿದರು. ಇದರಿಂದ ಭಿನ್ನ ವ್ಯಕ್ತಿತ್ವಗಳು ಇರಲು ಸಾಧ್ಯವಿಲ್ಲ ಎಂದು ಗಮನಿಸಿದ ಪೀಠ, ದೆಹಲಿ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಿತು.</p>.<p>ನೋಟಿಸ್ಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯ, ಕೇಂದ್ರ ಹಾಗೂ ದೆಹಲಿ ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದೆ.</p>.<p>ವಕೀಲ ಎನ್ ರಾಜಾರಾಮನ್ ಅವರು ಸಲ್ಲಿಸಿದ್ದ ಮತ್ತೊಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ಆದೇಶದಲ್ಲಿ ‘ಅಪರಾಧ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾಗಿಯೂ ಕಾನೂನು ಅನುಷ್ಠಾನ ವ್ಯವಸ್ಥೆ/ ಪೊಲೀಸರು, ಐವರು ಅಥವಾ ಅದಕ್ಕೂ ಹೆಚ್ಚು ಜನರು ಅಕ್ರಮವಾಗಿ ಗುಂಪುಗೂಡಲು ಅವಕಾಶ ಏಕೆ ನೀಡಿದ್ದರು’ ಎಂದು ಕೇಳಿತು.</p>.<p>‘ಅಕ್ರಮವಾಗಿ ಜಮಾವಣೆಗೊಂಡ ಜನರನ್ನು ಚದುರಿಸುವಂತೆ ಹೇಳಿದ ಬಳಿಕ ಅಂತಹ ಗುಂಪನ್ನು ಚದುರಿಸಲು ಪೊಲೀಸರು ಸೂಕ್ತ ಕ್ರಮಕೈಗೊಂಡರೇ ಹಾಗೂ ಅಂತಹ ಆದೇಶದ ಹೊರತಾಗಿಯೂ ಜಮಾವಣೆಗೊಂಡ ಜನರು ಚದುರಲಿಲ್ಲವೇ’ ಎಂದೂ ನ್ಯಾಯಾಲಯ ಪ್ರಶ್ನಿಸಿತು.</p>.<p>ಏತನ್ಮಧ್ಯೆ, ನಿಷೇಧಾಜ್ಞೆ ಅನುಷ್ಠಾನ ಸಂಬಂಧಿ ಎರಡು ಪ್ರಶ್ನೆಗಳಿಗೆ ಉತ್ತರಿಸಲು ಉಭಯ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನ್ಯಾಯಾಲಯ 2014ರ ಜನವರಿ 31ವರೆಗೆ ಕಾಲಾವಕಾಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>