ವಾರಾಣಸಿ(ಐಎಎನ್ ಎಸ್): ವಾರಾಣಸಿಯಲ್ಲಿರುವ ಹಿಂದೂ ವಿಶ್ವವಿದ್ಯಾನಿಲಯದ ಆವರಣದಲ್ಲಿ ಯುವಕರ ಗುಂಪೊಂದು ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಎಂಬ ಘೋಷಣೆಗಳನ್ನು ಕೂಗುತ್ತಾ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರತ್ತ ಇಟ್ಟಿಗೆ ತುಂಡು ಮತ್ತು ಕಲ್ಲುಗಳನ್ನು ತೂರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಪ್ರಸಿದ್ದ ಕೇಶವ ಪಾನ್ ಅಂಗಡಿ ಬಳಿ ಗುರುವಾರ ರಾತ್ರಿ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆಸಲಾಗಿದೆ.
ಈ ಘಟನೆ ಸಂಬಂಧ ವಾರಾಣಸಿ ಪೊಲೀಸರು ಅಪರಿಚಿತ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.