ತಿರುವನಂತಪುರ (ಪಿಟಿಐ): ಕೇರಳದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿದಿಲ್ಲ. ಶೇ 20ರಷ್ಟು ಮಳೆ ಕೊರತೆಯಾಗಿದ್ದು ಇದರಿಂದಾಗಿ ವಿದ್ಯುತ್ ಅಭಾವ ತಲೆದೋರುವ ಸಾಧ್ಯತೆ ಇದೆ. ಇದರಿಂದ ಕೃಷಿಗೂ ಸಮಸ್ಯೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 6ರಿಂದ ಕೇರಳದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ 540 ಮಿ. ಮೀ. ಮಳೆ ಆಗುವ ನಿರೀಕ್ಷೆ ಇತ್ತು. ಆದರೆ ಈ ಬಾರಿ 433.3 ಮಿ.ಮೀ ಮಾತ್ರ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.