ನವದೆಹಲಿ (ಪಿಟಿಐ): ಗಂಗಾ ನದಿ ಮಲಿನಗೊಳಿಸುತ್ತಿರುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ರಾಷ್ಟ್ರೀಯ ಹಸಿರು ಪೀಠಕ್ಕೆ ಸೂಚಿಸಿದೆ.
ನದಿ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳಿಗೆ ನೀರು ಹಾಗೂ ವಿದ್ಯುತ್ ಕಡಿತ ಮಾಡುವಂತೆ ಆದೇಶಿಸಿರುವ ಸುಪ್ರೀಂಕೋರ್ಟ್, ಇಂತಹ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ತರಾಟೆಗೆ ತೆಗೆದುಕೊಂಡಿದೆ.
ಈ ವಿಚಾರದಲ್ಲಿ ಹಸಿರು ಪೀಠಕ್ಕೆ ಸ್ವಾತಂತ್ರ್ಯ ನೀಡಿರುವ ನ್ಯಾಯಪೀಠ, ಇಂತಹ ಕೈಗಾರಿಕೆಗಳನ್ನು ಮುಚ್ಚಲೂಬಹುದು ಎಂದಿದೆ.