ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾದಲ್ಲಿರುವ ಆಶ್ರಮದಲ್ಲಿ ರಾಮ್ಪಾಲ್ ಅವರ ಬಂಧನಕ್ಕಾಗಿ ನಡೆಸಿದ ಕಾರ್ಯಚರಣೆಯ ವಿವರಗಳು, ಈ ವೇಳೆ ಗಾಯಗೊಂಡ ಜನರು, ಆಶ್ರಮದಲ್ಲಿದ್ದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಮತ್ತು ಆಸ್ತಿಹಾನಿಯ ಬಗೆಗಿನ ವಿವರಗಳನ್ನೊಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ಹರಿಯಾಣ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತು. ಬಳಿಕ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು.