ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೇನ್‌ಗೆ ಸಿಲುಕಿ ಕಾರ್ಮಿಕ ಸಾವು

Last Updated 30 ಏಪ್ರಿಲ್ 2016, 19:44 IST
ಅಕ್ಷರ ಗಾತ್ರ

ಬೆಂಗಳೂರು: ಚಲಿಸುತ್ತಿದ್ದ ಕ್ರೇನ್‌ ವಾಹನಕ್ಕೆ ಸಿಲುಕಿ ಗುತ್ತಿಗೆ ಕಾರ್ಮಿಕ ಬಿಹಾರ ಮೂಲದ ರಂಜಿತ್‌ (26) ಎಂಬುವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕದ ರೈಲುಗಾಲಿ ಕಾರ್ಖಾನೆಯಲ್ಲಿ ಶನಿವಾರ ನಡೆದಿದೆ.

ರಂಜಿತ್‌ ಅವರು ಕಾರ್ಖಾನೆಯ ಪಿ.ಸಿ ಬೇ ವಿಭಾಗದಲ್ಲಿ ಕಳೆದ 6 ತಿಂಗಳಿಂದ ಗ್ಯಾಸ್‌ ಕಟಿಂಗ್‌ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ 1 ಗಂಟೆಯಲ್ಲಿ ರಂಜಿತ್‌ ಸೇರಿ ಮೂವರು ಕಾರ್ಮಿಕರು ಉದ್ದವಾದ ರೈಲ್ವೆ ಹಳಿಗಳನ್ನು ಕ್ರೇನ್‌ ವಾಹನದ ಮೂಲಕ ಸಾಗಿಸುತ್ತಿದ್ದರು. ಈ ವೇಳೆ ರಂಜಿತ್‌ ಆಯತಪ್ಪಿ ಬಿದ್ದು ಕ್ರೇನ್‌ಗೆ ಸಿಲುಕಿದ್ದಾರೆ. ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದು, ಬಿಹಾರದಲ್ಲಿ ನೆಲೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT