ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಮನಸೆಳೆದ ನೃ ತ್ಯ ಪ್ರದರ್ಶನ

8ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮಕ್ಕೆ ಚಾಲನೆ
Last Updated 6 ಫೆಬ್ರುವರಿ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಛತ್ತೀಸಗಡ ರಾಜ್ಯದ ಬುಡಕಟ್ಟು ಜನಾಂಗದ ಯುವಕ ಹಾಗೂ ಯುವತಿಯರಿಗೆ ಕರ್ನಾಟಕ ಸಂಸ್ಕೃತಿ ಪರಿಚಯಿಸುವ ‘8ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮ’ಕ್ಕೆ ಶನಿವಾರ ಚಾಲನೆ ದೊರೆಯಿತು.

ನೆಹರು ಯುವ ಕೇಂದ್ರ ಕರ್ನಾಟಕ ವಲಯ ವತಿಯಿಂದ ನೃಪತುಂಗ ರಸ್ತೆಯ ಯವನಿಕಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉದ್ಘಾಟನಾ ಸಮಾರಂಭದಲ್ಲಿ ಬುಡಕಟ್ಟು ಜನಾಂಗದ ಯುವಜನರು ತಮ್ಮ ಸಂಸ್ಕೃತಿ ಬಿಂಬಿಸುವ ವಿವಿಧ ಬಗೆಯ ನೃತ್ಯ ಪ್ರದರ್ಶಿಸಿ ಗಮನಸೆಳೆದರು.

ಫೆ. 11ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಛತ್ತೀಸಗಡ ರಾಜ್ಯದ 9 ಜಿಲ್ಲೆಗಳ 221 ಯುವಜನರು ಭಾಗವಹಿಸಿದ್ದಾರೆ. ಅವರು ತಮ್ಮ ಸಂಸ್ಕೃತಿ ಉಡುಗೆ ತೊಟ್ಟು  ಸ್ಥಳೀಯ ಜನರೊಂದಿಗೆ ಬೆರೆಯಲಿದ್ದಾರೆ.

ಸ್ಥಳೀಯ ಸಂಸ್ಕೃತಿ ಬಗ್ಗೆ ಮಾಹಿತಿ ಪಡೆಯಲಿರುವ ಬುಡಕಟ್ಟು ಜನಾಂಗದ ಯುವಜನರು, ತಮಗಿರುವ ಸಂದೇಹಗಳನ್ನು ಸಂವಾದದಲ್ಲಿ ಪರಿಹರಿಸಿಕೊಳ್ಳಲಿದ್ದಾರೆ. ವಿಶೇಷ ಉಪನ್ಯಾಸಗಳಿದ್ದು, ಪರಿಣಿತ ತಜ್ಞರು ಸಂಸ್ಕೃತಿ ಸಂಬಂಧಿ ವಿಷಯಗಳ ಕುರಿತು ಮಾತನಾಡಲಿದ್ದಾರೆ.

ವಿಶೇಷವಾಗಿ ಪ್ರೇಕ್ಷಣೀಯ ಸ್ಥಳಗಳ ಕುರಿತು ತಿಳಿಸಲು ಬೆಂಗಳೂರು ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರ ಪ್ರಯುಕ್ತ ವಿಧಾನಸೌಧ, ಮೆಟ್ರೊ, ಉದ್ಯಾನಗಳು ಹಾಗೂ ನಗರದ ಇತರೆ ಸ್ಥಳಗಳಿಗೆ ಯುವಜನರು ಭೇಟಿ ನೀಡಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT