ಮುಂಬೈನ ಸರ್ವೋದಯ ಮಂಡಳಿಯು ಈ ಪರೀಕ್ಷೆಯನ್ನು ನಡೆಸಿತ್ತು. ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ನೀಡಲಾಗಿದೆ ಎಂದು ಕಾರಾಗೃಹದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಂಧಿ ಜಯಂತಿ ಅಂಗವಾಗಿ ಈ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಗಾಂಧಿ ಜೀವನ ಚರಿತ್ರೆ, ಅವರ ಚಿಂತನೆ ಮತ್ತು ಸಿದ್ಧಾಂತಗಳ ಮೇಲೆ ಪ್ರಶ್ನೆಗಳನ್ನು ಕೇಳಲಾಗಿತ್ತು. ನೂರು ಅಂಕಗಳಿಗೆ ನಡೆದ ಈ ಪರೀಕ್ಷೆಯಲ್ಲಿ 80 ಅಂಕಗಳನ್ನು ಪಡೆದಿರುವ ಕೈದಿಯೊಬ್ಬರು ಮೊದಲ ಶ್ರೇಣಿ ಪಡೆದಿದ್ದಾರೆ ಎಂದು ಸರ್ವೋದಯ ಮಂಡಳಿಯ ಹಿರಿಯ ಉಪನ್ಯಾಸಕರೊಬ್ಬರು ತಿಳಿಸಿದ್ದಾರೆ.
ನೈಜಿರಿಯಾದ ಕೈದಿಯೊಬ್ಬರು 65 ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವುದು ವಿಶೇಷ.