ಬೆಂಗಳೂರು: ಡಾ. ಜಿಎಸ್ ಎಸ್ ವಿಶ್ವಸ್ತ ಮಂಡಲಿ ನೀಡುವ ಪ್ರತಿಷ್ಠಿತ ‘ಡಾ. ಜಿ.ಎಸ್.ಎಸ್’ ಪ್ರಶಸ್ತಿಗೆ ಹಿರಿಯ ವಿಮರ್ಶಕ ಗಿರಡ್ಡಿ ಗೋವಿಂದರಾಜ ಆಯ್ಕೆಯಾಗಿದ್ದಾರೆ.
₨ 15 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ.
ಜಿ.ಎಸ್. ಶಿವರುದ್ರಪ್ಪನವರ ಜನ್ಮದಿನವಾದ ಫೆ. 7ರಂದು ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಎಚ್.ಎಸ್. ವೆಂಕಟೇಶಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಕವಿ ಚೆನ್ನವೀರ ಕಣವಿಯವರು ಪ್ರಶಸ್ತಿ ಪ್ರದಾನ ಮಾಡುವರು.