ಬೊಕಾರೊ/ಜಾರ್ಖಂಡ್(ಪಿಟಿಐ): ದ್ವೇಷ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ ಹಾಗೂ ಬಿಹಾರದ ಮಾಜಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ ಬಂಧನದ ವಾರಂಟ್ ಹೊರಡಿಸಿದೆ.
ಆದರೆ ಗುರುವಾರ ಕೋರ್ಟ್ಗೆ ಶರಣಾಗುವುದಾಗಿ ಗಿರಿರಾಜ್ ಸಿಂಗ್ ತಿಳಿಸಿದ್ದಾರೆ.
ಎಫ್ಐಆರ್: ಈ ನಡುವೆ ಫಾರೂಕಾಬಾದ್ನಲ್ಲಿ ನೀತಿಸಂಹಿತೆ ಉಲ್ಲಂಘಿಸಿದ ಆರೋಪದಡಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.