ಜಾರಿಯಾಗದ ಶಿಫಾರಸು
೨೦೧೧ರಲ್ಲಿ ನಗರದ ಕೆರೆಗಳು ಕಣ್ಮರೆಯಾಗುತ್ತಿರುವ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಕೆರೆ ಸಂರಕ್ಷಣೆ ಸಂಬಂಧ ಮಾರ್ಗದರ್ಶಿ ಸೂತ್ರ ರಚಿಸಲು ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಆ ಸಮಿತಿಯು ನೀಡಿದ ವರದಿಯಲ್ಲಿ ಗೊಟ್ಟಿಗೆರೆ ಕೆರೆಯ ಅಭಿವೃದ್ಧಿ ಮಾಡಬೇಕೆಂಬ ಶಿಫಾರಸು ಕೂಡ ಸೇರಿದೆ. ಆದರೆ ಅದು ಈವರೆಗೆ ಜಾರಿಗೆ ಬಂದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.