ಬೆಂಗಳೂರು: ರಾಜ್ಯ ಸರ್ಕಾರದ ಈ ಸಾಲಿನ ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾ ಗಿದೆ. ಈ ಪ್ರಶಸ್ತಿಯು ₹ 10 ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಶರಣ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿರುವುದು, ಶರಣ ಸಂಸ್ಕೃತಿಯ ಪ್ರಚಾರಕ್ಕೆ ಅವರು ವಹಿಸುತ್ತಿರುವ ಶ್ರಮ ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕಲಾಭವ ನದಲ್ಲಿ ಮೇ 9ರಂದು ನಡೆಯುವ ಕಾರ್ಯ ಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.