ಬೆಂಗಳೂರು: ಜಾಮೀನು ಸಿಕ್ಕರೂ ಜೈಲಿನಿಂದ ಬಿಡುಗಡೆಯಾಗಿಲ್ಲ ಎಂದು ಬೇಸತ್ತು, ನಟ ಹುಚ್ಚ ವೆಂಕಟ್ ಅವರು ಸೋಮವಾರ ಗೋಡೆಗೆ ಹಣೆ ಚಚ್ಚಿಕೊಂಡು ಗಾಯ ಮಾಡಿಕೊಂಡಿದ್ದಾರೆ.
ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಬಂಧಿತರಾಗಿರುವ ನಟ ಹುಚ್ಚ ವೆಂಕಟ್ ಅವರು, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಹುಚ್ಚ ವೆಂಕಟ್ ಅವರು ಗೋಡೆಗೆ ಹಣೆ ಚಚ್ಚಿಕೊಂಡು ಗಾಯಮಾಡಿ ಕೊಂಡಿದ್ದಾರೆ. ಅವರಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.