ಚನ್ನರಾಯಪಟ್ಟಣ: ‘ಹುಲಿ ಹಿಂಸೆಯ ಪ್ರತಿರೂಪ. ಅದರ ಬದಲು ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು’ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
ಪಟ್ಟಣದ ರಾಘವೇಂದ್ರ ಮಠದಲ್ಲಿ ಗುರುವಾರ ಏರ್ಪಡಿಸಿದ್ದ ಗುರುರಾಘವೇಂದ್ರ ಸ್ವಾಮಿ ಅವರಿಗೆ ‘ರಜತ ಕವಚ ಪ್ರತಿಷ್ಠಾಪನಾ ಸಮಾರಂಭ’ದಲ್ಲಿ ಅವರು ಆಶೀರ್ವಚನ ನೀಡಿದರು.
‘ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಅದು ಶಾಂತಿಯ ಸಂಕೇತ. ಅದನ್ನೇ ರಾಷ್ಟ್ರೀಯ ಪ್ರಾಣಿಯಾಗಿಸಿದರೆ ದೇಶ ಶಾಂತಿಯುತವಾಗಿರುತ್ತದೆ’ ಎಂದು ಅವರು ತಿಳಿಸಿದರು.