<p>ರಾಮನಗರ: ಚನ್ನಪಟ್ಟಣ ತಾಲ್ಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ಇದೇ 15 ರಂದು ಚನ್ನಪಟ್ಟಣದ ಪುರಭವನದ ಆವರಣದಲ್ಲಿ ಆಯೋಜಿಸಲಾಗಿದೆ.<br /> <br /> ಗೋವಿಂದಹಳ್ಳಿ ದೇವೇಗೌಡ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ. ಅಂದು ಬೆಳಿಗ್ಗೆ 8- ಗಂಟೆಗೆ ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ತಹಶೀಲ್ದಾರ್ ಈ. ಶಿವರುದ್ರಪ್ಪ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಶಿವಮಾದು ನೆರವೇರಿಸುವರು.<br /> <br /> ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಬೆಳಿಗ್ಗೆ 8,-45 ಕ್ಕೆ ಪಂಚದೀಪ ವೃತ್ತದಿಂದ ಆರಂಭವಾಗಿ ಪುರಭವನದ ವೇದಿಕೆ ತಲುಪಲಿದೆ. ಸಮ್ಮೇಳನದ ಉದ್ಘಾಟನೆಯು ಬೆಳಿಗ್ಗೆ 10.-30 ಗಂಟೆಗೆ ಜರುಗಲಿದ್ದು, ಚನ್ನಪಟ್ಟಣ ವಿರಕ್ತ ಮಠದ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. <br /> <br /> ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಪಿ.ಯೋಗೇಶ್ವರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಭಾಷಣಕಾರರಾಗಿ ಸಾಹಿತಿ ಡಾ. ಸಾ.ಶಿ.ಮರುಳಯ್ಯ ಹಾಗೂ ಡಾ. ಎಲ್.ಹನುಮಂತಯ್ಯ ಭಾಗವಹಿಸುವರು. ಬೆಂ.ಗ್ರಾ.ಜಿಲ್ಲೆ ಕ.ಸಾ,ಪ ಮಾಜಿ ಜಿಲ್ಲಾಧ್ಯಕ್ಷ ಸು.ತ.ರಾಮೇಗೌಡ ಉಪಸ್ಥಿತರಿರುವರು. ಸಮ್ಮೇಳನಾಧ್ಯಕ್ಷ ಗೋವಿಂದಹಳ್ಳಿ ದೇವೇಗೌಡ ಭಾಷಣ ನುಡಿಗಳನ್ನಾಡುವರು.<br /> <br /> ಮಧ್ಯಾಹ್ನ 12-.30 ಕ್ಕೆ ಕವಿಗೋಷ್ಠಿ, ಮಧ್ಯಾಹ್ನ 2-.15 ಕ್ಕೆ ವಿಚಾರಗೋಷ್ಠಿ, ಸಂಜೆ 4-.15 ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಂಜೆ 5.-15 ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ. ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಂಜೆ 6 ಗಂಟೆಗೆ ಏರ್ಪಡಿಸಲಾಗಿದ್ದು, ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಸಮಾರೋಪ ಭಾಷಣ ಮಾಡುವರು. ಸಂಸದ ಡಿ.ಕೆ.ಸುರೇಶ್, ಹಾಗೂ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡುವರು. ರಾತ್ರಿ 7.-30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.<br /> <br /> ತಾ.ಪಂ.ಸಾಮಾನ್ಯ ಸಭೆ 15ರಂದು<br /> ರಾಮನಗರ: ರಾಮನಗರ ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ಎ. ಮಂಜುನಾಥ್ ಅವರ ನೇತೃತ್ವದಲ್ಲಿ ಇದೇ 15ರಂದು ಬೆಳಿಗ್ಗೆ 11 ಗಂಟೆಗೆ ತಾ,ಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಚನ್ನಪಟ್ಟಣ ತಾಲ್ಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ಇದೇ 15 ರಂದು ಚನ್ನಪಟ್ಟಣದ ಪುರಭವನದ ಆವರಣದಲ್ಲಿ ಆಯೋಜಿಸಲಾಗಿದೆ.<br /> <br /> ಗೋವಿಂದಹಳ್ಳಿ ದೇವೇಗೌಡ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ. ಅಂದು ಬೆಳಿಗ್ಗೆ 8- ಗಂಟೆಗೆ ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ತಹಶೀಲ್ದಾರ್ ಈ. ಶಿವರುದ್ರಪ್ಪ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಶಿವಮಾದು ನೆರವೇರಿಸುವರು.<br /> <br /> ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಬೆಳಿಗ್ಗೆ 8,-45 ಕ್ಕೆ ಪಂಚದೀಪ ವೃತ್ತದಿಂದ ಆರಂಭವಾಗಿ ಪುರಭವನದ ವೇದಿಕೆ ತಲುಪಲಿದೆ. ಸಮ್ಮೇಳನದ ಉದ್ಘಾಟನೆಯು ಬೆಳಿಗ್ಗೆ 10.-30 ಗಂಟೆಗೆ ಜರುಗಲಿದ್ದು, ಚನ್ನಪಟ್ಟಣ ವಿರಕ್ತ ಮಠದ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. <br /> <br /> ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಪಿ.ಯೋಗೇಶ್ವರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಭಾಷಣಕಾರರಾಗಿ ಸಾಹಿತಿ ಡಾ. ಸಾ.ಶಿ.ಮರುಳಯ್ಯ ಹಾಗೂ ಡಾ. ಎಲ್.ಹನುಮಂತಯ್ಯ ಭಾಗವಹಿಸುವರು. ಬೆಂ.ಗ್ರಾ.ಜಿಲ್ಲೆ ಕ.ಸಾ,ಪ ಮಾಜಿ ಜಿಲ್ಲಾಧ್ಯಕ್ಷ ಸು.ತ.ರಾಮೇಗೌಡ ಉಪಸ್ಥಿತರಿರುವರು. ಸಮ್ಮೇಳನಾಧ್ಯಕ್ಷ ಗೋವಿಂದಹಳ್ಳಿ ದೇವೇಗೌಡ ಭಾಷಣ ನುಡಿಗಳನ್ನಾಡುವರು.<br /> <br /> ಮಧ್ಯಾಹ್ನ 12-.30 ಕ್ಕೆ ಕವಿಗೋಷ್ಠಿ, ಮಧ್ಯಾಹ್ನ 2-.15 ಕ್ಕೆ ವಿಚಾರಗೋಷ್ಠಿ, ಸಂಜೆ 4-.15 ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಂಜೆ 5.-15 ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ. ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಂಜೆ 6 ಗಂಟೆಗೆ ಏರ್ಪಡಿಸಲಾಗಿದ್ದು, ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಸಮಾರೋಪ ಭಾಷಣ ಮಾಡುವರು. ಸಂಸದ ಡಿ.ಕೆ.ಸುರೇಶ್, ಹಾಗೂ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡುವರು. ರಾತ್ರಿ 7.-30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.<br /> <br /> ತಾ.ಪಂ.ಸಾಮಾನ್ಯ ಸಭೆ 15ರಂದು<br /> ರಾಮನಗರ: ರಾಮನಗರ ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ಎ. ಮಂಜುನಾಥ್ ಅವರ ನೇತೃತ್ವದಲ್ಲಿ ಇದೇ 15ರಂದು ಬೆಳಿಗ್ಗೆ 11 ಗಂಟೆಗೆ ತಾ,ಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>