ಬೆಂಗಳೂರು: ಬನಶಂಕರಿ ಸಮೀಪದ ಕಾವೇರಿನಗರದ ಕೊಳೆಗೇರಿಯಲ್ಲಿ ಭಾನುವಾರ ರಾತ್ರಿ ದುಷ್ಕರ್ಮಿಗಳು ಅಕ್ರಮ್ (30) ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಅಕ್ರಮ್ ಕೂಲಿ ಕೆಲಸ ಮಾಡುತ್ತಿದ್ದರು. ಅವರು ರಾತ್ರಿ 11.45ರ ಸುಮಾರಿಗೆ ಮನೆ ಬಳಿ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದಿರುವ ನಾಲ್ವರು ದುಷ್ಕರ್ಮಿಗಳು ಅಕ್ರಮ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದರು.
ಕೂಡಲೇ ಕುಟುಂಬ ಸದಸ್ಯರು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಹಳೆ ದ್ವೇಷದ ಕಾರಣಕ್ಕೆ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.